News Karnataka Kannada
Monday, April 29 2024
ಬೆಂಗಳೂರು ನಗರ

ನಾಳೆ ಮಧ್ಯಾಹ್ನ ಸಚಿವ ಸಂಪುಟ ವಿಸ್ತರಣೆ

Photo Credit :

ನಾಳೆ ಮಧ್ಯಾಹ್ನ ಸಚಿವ ಸಂಪುಟ ವಿಸ್ತರಣೆ

ಬೆಂಗಳೂರು: ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಎರಡು ವಾರಗಳ ಬಳಿಕ ಹೆಚ್. ಡಿ. ಕುಮಾರಸ್ವಾಮಿ ಅವರು ಮೊದಲ ಸಲ ಸಚಿವ ಸಂಪುಟ ವಿಸ್ತರಣೆ ಮಾಡಲಿದ್ದಾರೆ.

ಬುಧವಾರ ಮಧ್ಯಾಹ್ನ ಎರಡು ಗಂಟೆ ವೇಳೆಗೆ ಸಚಿವ ಸಂಪುಟ ವಿಸ್ತರಣೆ ನಡೆಯಲಿದ್ದು, ಜೆಡಿಎಸ್ ನ 9 ಮಂದಿ ಶಾಸಕರು ಸಂಪುಟ ಸೇರಲಿದ್ದಾರೆ ಎಂದು ವರದಿಗಳು ಹೇಳಿವೆ.

ಎಂಟರಿಂದ 9 ಮಂದಿ ಜೆಡಿಎಸ್ ನ ಶಾಸಕರನ್ನು ಸಂಪುಟಕ್ಕೆ ಸೇರಿಸಲಾಗುವುದು ಎಂದು ಕುಮಾರಸ್ವಾಮಿ ಅವರು ಸಂಪುಟ ವಿಸ್ತರಣೆ ಬಗ್ಗೆ ಕೇಳಿದ ಪ್ರಶ್ನೆಗೆ ಈ ರೀತಿಯಾಗಿ ಉತ್ತರಿಸಿದರು.

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಪಕ್ಷದಲ್ಲಿ ಯಾವುದೇ ರೀತಿಯ ಭಿನ್ನಾಭಿಪ್ರಾಯವಿಲ್ಲ. ಹೆಚ್. ಡಿ. ದೇವೇಗೌಡ ಅವರು ಸಂಪುಟ ವಿಸ್ತರಣೆಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದಾರೆ ಎಂದರು.

ಸಮ್ಮಿಶ್ರ ಸರ್ಕಾರದ ಒಡಂಬಡಿಕೆಯಂತೆ ಕಾಂಗ್ರೆಸ್ ಗೆ 22 ಸಚಿವ ಸ್ಥಾನ ಮತ್ತು ಜೆಡಿಎಸ್ ಗೆ 12 ಸಚಿವ ಸ್ಥಾನಗಳನ್ನು ನೀಡಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
187

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು