ಬೆಂಗಳೂರು : ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ, ಕಾಂಗ್ರೆಸ್ ಪಾದಯಾತ್ರೆ ನಡೆಸುತ್ತಿದೆ. ಈ ವೇಳೆಯಲ್ಲಿಯೇ ಕಾಂಗ್ರೆಸ್ ವಿರುದ್ಧ ಸಿಡಿದೆದ್ದಿರುವಂತ ಬಿಜೆಪಿ ನಾಯಕರು, ನಾಳೆ ರಾಮನಗರದಲ್ಲಿ ಮಹತ್ವದ ಸುದ್ಧಿಗೋಷ್ಠಿಯನ್ನು ನಡೆಸಲಿದ್ದಾರೆ.
ಈ ಬಗ್ಗೆ ಸುದ್ದಿಗಾರರಿಗೆ ಮಾಹಿತಿ ನೀಡಿದಂತ ಸಚಿವ ಡಾ.ಸಿಎನ್.ಅಶ್ವತ್ಥನಾರಾಯಣ ಅವರು, ಕಾಂಗ್ರೆಸ್ ನಡೆಸುತ್ತಿರುವಂತ ಪಾದಯಾತ್ರೆ ರಾಜಕೀಯ ನಾಟಕವಾಗಿದೆ. ಡಿಕೆ ಶಿವಕುಮಾರ್, ಸಿದ್ಧರಾಮಯ್ಯ ಹಾಗೂ ಎಂ.ಬಿ.ಪಾಟೀಲ್ ತ್ರಿಮೂರ್ತಿಗಳಿದ್ದಂತೆ ಎಂದು ಕಿಡಿಕಾರಿದರು.
ನಾಳೆ ಬಿಜೆಪಿ ಪಕ್ಷದಿಂದ ರಾಮನಗರದಲ್ಲಿ ಕಾಂಗ್ರೆಸ್ ನಾಯಕರ ಪಾದಯಾತ್ರೆ ಖಂಡಿಸಿ ಸುದ್ಧಿಗೋಷ್ಠಿ ನಡೆಸುತ್ತಿದ್ದೇವೆ. ಈ ಸುದ್ಧಿಗೋಷ್ಠಿಯಲ್ಲಿ ಕಾಂಗ್ರೆಸ್ ನಾಯಕರ ನಿಜವಾದ ಬಣ್ಣ ಬಯಲು ಮಾಡೋದಾಗಿ ತಿಳಿಸಿದರು.