News Karnataka Kannada
Saturday, May 18 2024
ಬೆಂಗಳೂರು ನಗರ

ನಾಳೆ ವಿಶ್ವಾಸ ಮತ ಗಳಿಸಲು ಸಿಎಂ ಯಡಿಯೂರಪ್ಪಗೆ ಸುಪ್ರೀಂಕೋರ್ಟ್ ಆದೇಶ

Photo Credit :

ನಾಳೆ ವಿಶ್ವಾಸ ಮತ ಗಳಿಸಲು ಸಿಎಂ ಯಡಿಯೂರಪ್ಪಗೆ ಸುಪ್ರೀಂಕೋರ್ಟ್ ಆದೇಶ

ಬೆಂಗಳೂರು: ಬಿ.ಎಸ್‌.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲು ರಾಜ್ಯಪಾಲ ವಜುಭಾಯ್ ವಾಲಾ ಅವಕಾಶ ನೀಡಿದ ಕ್ರಮವನ್ನು ಪ್ರಶ್ನಿಸಿ ಕಾಂಗ್ರೆಸ್‌–ಜೆಡಿಎಸ್‌ ಸಲ್ಲಿಸಿರುವ ಅರ್ಜಿ ಕುರಿತು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿದ ತ್ರಿಸದಸ್ಯ ಪೀಠ ನಾಳೆ ಸಂಜೆ 4 ಗಂಟೆಗೆ ವಿಶ್ವಾಸ ಮತಯಾಚಿಸಲು ಯಡಿಯೂರಪ್ಪಗೆ ಅದೇಶ ನೀಡಿದೆ. ಇದೀಗ ಯಡಿಯೂರಪ್ಪ ಅವರ ಮುಖ್ಭಯಮಂತ್ರಿ ಪಟ್ಟದ ಭವಿಚ್ಯ ನಾಳೆ ಸಂಜೆ 4ಕ್ಕೆ ನಿರ್ಧಾರವಾಗಲಿದೆ. 

ಮೊದಲು ಅರ್ಜಿದಾರರಿಗೆ ಎರಡು ಆಯ್ಕೆ ನೀಡಿದ ಸುಪ್ರೀಂ ಕೋರ್ಟ್ ರಾಜ್ಯಪಾಲರ ನಿರ್ಣಯದ ಬಗ್ಗೆ ವಿಸ್ಕೃತ ವಿಚಾರಣೆ ಬೇಕೆ ಅಥವಾ ನಾಳೆಯೇ ವಿಶ್ವಾಸಮತ ಆದೇಶ ನೀಡಬೇಕೆ ಎಂದು ಕೋರ್ಟ್ ಅರ್ಜಿದಾರರಿಗೆ ಆಯ್ಕೆ ನೀಡಿತ್ತು. ನಂತರದ ವಾದದ ಬಳಿಕ ಸುಪ್ರೀಂ ಮೂವರು ನ್ಯಾಯಮೂರ್ತಿಗಳು ನಾಳೆ ಬಿಜೆಪಿ ವಿಶ್ವಾಸಮತ ಯಾಚನೆಗೆ ಪೀಠ ಆದೇಶ ಹೊರಡಿಸಿದೆ. ನ್ಯಾಯಮೂರ್ತಿಗಳಾದ
ಎ.ಕೆ. ಸಿಕ್ರಿ, ಎಸ್‌.ಎ. ಬೋಬ್ಡೆ ಹಾಗೂ ಅಶೋಕ್‌ ಭೂಷಣ್‌ ಅವರಿದ್ದ ತ್ರಿಸದಸ್ಯ ಪೀಠ ಆದೇಶವನ್ನು ಹೊರಡಿಸಿತು.

ಮೊದಲು ಬಿಜೆಪಿ ಪರ ವಾದ ಮಂಡಿಸಿದ ವಕೀಲ ಮುಕುಲ್ ರೋಹ್ಟಗಿ ಅವರು ನಾಳೆಯೇ ವಿಶ್ವಾಸಮತ ಯಾಚಿಸಲು ವಿರೋಧ ವ್ಯಕ್ತಪಡಿಸಿದರು.

ವಿಶ್ವಾಸ ಮತ ಯಾಚನೆ ಗಳಿಸಲು ನಾಳೆ ಸೂಕ್ತ ವ್ಯವಸ್ಥೆಯೊಂದಿಗೆ ಎಲ್ಲ ಶಾಸಕರು ಸದನದಲ್ಲಿ ಹಾಜರಿದ್ದು ಸೂಕ್ತ ಭದ್ರತೆಯನ್ನು ಒದಗಿಸಿ ವಿಶ್ವಾಸ ಮತ ಗಳಿಸಲು ಡಿಜಿಪಿಗೆ ಸುಪ್ರೀಂಕೋರ್ಟ್ ನ ತ್ರಿಸದಸ್ಯ ಪೀಠ ಹೇಳಿಕೆ ನೀಡಿತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು