News Karnataka Kannada
Monday, April 29 2024
ಬೆಂಗಳೂರು ನಗರ

ನಾಳೆ ಸಿಎಂ ನೇತೃತ್ವದಲ್ಲಿ ಸಭೆ: ನೈಟ್‌ ಕರ್ಫ್ಯೂ‌ ಜಾರಿ ಸೇರಿದಂತೆ ಮಹತ್ವದ ತೀರ್ಮಾನ

Cm Bommayi
Photo Credit :

ಹುಬ್ಬಳ್ಳಿ: ಒಮಿಕ್ರಾನ್ ಹೆಚ್ಚಳ ಹಿನ್ನೆಲೆಯಲ್ಲಿ ರಾತ್ರಿ ಕರ್ಫ್ಯೂ ಸೇರಿದಂತೆ ಮುಂಜಾಗ್ರತಾ ಕ್ರಮಗಳ ಬಗ್ಗೆ ರವಿವಾರ ಬೆಂಗಳೂರಿನಲ್ಲಿ ತಜ್ಞರು, ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಮಿಕ್ರಾನ್ ವಿಚಾರದಲ್ಲಿ ನಮಗೆ ಮಹಾರಾಷ್ಟ್ರ, ಕೇರಳದಿಂದ ಹೆಚ್ಚು ಆತಂತವಿತ್ತು. ಇದೀಗ ತಮಿಳುನಾಡಿನಲ್ಲಿಯೂ ಪ್ರಕರಣ ಗಳು ಹೆಚ್ಚುತ್ತಿವೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮುಂದಿನ ಕ್ರಮ, ಹೊಸ ವರ್ಷಾಚರಣೆ ಬಗ್ಗೆಯೂ ಚರ್ಚಿಸಲಾಗುವುದು ಎಂದರು.

, ಹೊಸ ವರ್ಷಾಚರಣೆ ಸೇರಿದಂತೆ ಕರೋನ ಹಾಗೂ ಒಮಿಕ್ರಾನ್‌ ಸೋಂಕಿಗೆ ಸಂಬಂಧಪಟ್ಟಂತೆ ಅಧಿಕಾರಿಗಳ ಜೊತೆಗೆ ಮಹತ್ವದ ಸಭೆ ನಡೆಸಲಾಗುವುದು, ಇದೇ ವೇಳೆಯಲ್ಲಿ, ಸಭೆಯಲ್ಲಿ ನೈಟ್ ಕರ್ಫ್ಯು ಬಗ್ಗೆಯೂ ನಾಳೆ ಚರ್ಚೆ ಮಾಡಿ ಅಂತಿಮ ತೀರ್ಮಾನವನ್ನು ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.ಇನ್ನೂ ಒಮಿಕ್ರಾನ್ ಸೋಂಕು ಮಹಾರಾಷ್ಟ್ರ, ಕೇರಳದಿಂದ ಬರುವ ಸಾಧ್ಯ ಹೆಚ್ಚಾಗಿದೆ. ಈ ನಿಟ್ಟಿನಲ್ಲಿ ರಾಜ್ಯದ ಗಡಿ ಭಾಗಗಳಲ್ಲಿ ಎಲ್ಲಾ ರೀತಿಯಲ್ಲಿ ಕಟ್ಟೆಚ್ಚರ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು