ಬೆಂಗಳೂರು : ನಾವು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ 30-40 ಸ್ಥಾನ ಗೆಲ್ಲುವುದು ದೊಡ್ಡದೇನು ಅಲ್ಲ. ನಾವು ಸುಮ್ಮನೆ ಇದ್ದರೂ ಜನರು ನಮಗೆ ಮತಹಾಕಿ, ಗೆಲ್ಲಿಸುತ್ತಾರೆ. ಆದ್ರೇ ನಾವು ಅಧಿಕಾರಕ್ಕೆ ಹಪಾಹಪಿಸ್ತಾ ಇಲ್ಲ ಎಂಬುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.
ಇಂದು ನೂತನ ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಸಿಎಂ ಇಬ್ರಾಹಿಂ ಅಧಿಕಾರ ಸ್ವೀಕರಿಸೋ ಕಾರ್ಯಕ್ರಮದಲ್ಲಿ ಮಾತನಾಡಿದಂತ ಅವರು, ಜನರು ಶಾಂತಿಯಿಂದ ವರ್ತಿಸಬೇಕಾಗಿದೆ. ಈ ಸಂದರ್ಭದಲ್ಲಿ ಇಬ್ರಾಹಿಂ ಅವರ ಜವಾಬ್ದಾರಿ ಬಹಳ ದೊಡ್ಡದು ಎಂಬುದಾಗಿ ಹುಬ್ಬಳ್ಳಿಯಲ್ಲಿನ ಗಲಭೆ ಕುರಿತಂತೆ ಮನವಿ ಮಾಡಿದರು.
ನಾವು 30-40 ಸ್ಥಾನ ಗೆಲ್ಲುವುದು ದೊಡ್ಡದೇನು ಅಲ್ಲಾ, ನಾವು ಸುಮ್ಮನೆ ಇದ್ದರೂ ಜನರು ನಮಗೆ ಮತ ಹಾಕಿ ಗೆಲ್ಲಿಸುತ್ತಾರೆ. ಕಾಂಗ್ರೆಸ್ ನ ನಾಯಕರೊಬ್ಬರು ಟ್ರಾಕ್ಟರ್ ರ್ಯಾಲಿ ನಡೆಸುತ್ತಾರೆ. ಎಸ್.ಆರ್ ಪಾಟೀಲ್ ಸ್ವಾಭಿಮಾನದ ರ್ಯಾಲಿ ನಡೆಸಿದ್ದಾರೆ. ಹೇಗೆ ನೀರು ತರುತ್ತೇವೆ ಅಂತಾ ಹೇಳಿಲ್ಲ. ನಾವು ಅಧಿಕಾರಕ್ಕಾಗಿ ಹಪಾಹಪಿಸುತ್ತಿಲ್ಲ. ನಮ್ಮ ಗುರಿ ಏನಿದ್ದರೂ 123 ಮಿಷನ್ ಆಗಿದೆ ಎಂದರು.
ಪಕ್ಷದ ನಾಯಕರು ಚಳಿ ಬಿಟ್ಟು ಜನರ ಬಳಿ ಕೆಲಸ ಮಾಡಬೇಕಿದೆ. ಆಗ ಪಕ್ಷ ಸ್ವತಂತ್ರವಾಗಿ ಅಧಿಕಾರಕ್ಕೆ ಬರಲಿದೆ. ಎಲ್ಲಾ ಸಮಾಜವನ್ನ ಒಟ್ಟಿಗೆ ಕರೆದುಕೊಂಡು ಹೋಗುವ ಜವಾಬ್ದಾರಿ ಇಬ್ರಾಹಿಂ ಮೇಲಿದೆ. ಆ ನಿಟ್ಟಿನಲ್ಲಿ ಯಶಸ್ವಿಯಾಗಿ ನಿಭಾಯಿಸಲಿ ಎಂದು ಸಿಎಂ ಇಬ್ರಾಹಿಂಗೆ ಕಿವಮಾತು ಹೇಳಿದರು.