ಬೆಂಗಳೂರು : ದೇವೇಗೌಡರು ಹಾಕಿರುವ ಪಂಚೆಗೂ, ಇವರು ಹಾಕಿರುವುದಕ್ಕೂ ವ್ಯತ್ಯಾಸವಿದೆ. ನಾವೆಲ್ಲರೂ ದೇವೇಗೌಡರು ಆಗುವುದಕ್ಕೆ ಆಗುತ್ತದಾ? ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಡಿ.ಕೆ.ಶಿವಕುಮಾರ್ಗೆ ತಿರುಗೇಟು ನೀಡಿದ್ದಾರೆ.
ದೇವೇಗೌಡರು ಪಂಚೆ ಹಾಕಿಲ್ವಾ ? ಎಂದು ಡಿ.ಕೆ.ಶಿವಕುಮಾರ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ದೇವೇಗೌಡರ ಪಂಚೆಗೂ ಅವರಿಗೂ ವ್ಯತ್ಯಾಸವಿದೆ. ದೇವೇಗೌಡರ ಹೋರಾಟಕ್ಕೂ ಇವರದ್ದಕ್ಕೂ ವ್ಯತ್ಯಾಸವಿದೆ . ನಮ್ಮ ಹೋರಾಟ, ಪಾದಯಾತ್ರೆ ಜನಪರವಾಗಿತ್ತು ಎಂದು ಹೇಳಿದ್ದಾರೆ.
ಮೇಕೆದಾಟು ಯೋಜನೆಗೆ ನಾನು ಮುಖ್ಯಮಂತ್ರಿಯಾಗಿದ್ದಾಗಲೇ ಡಿಪಿಎಆರ್ ಮಾಡಿದ್ದು. ಐದು ವರ್ಷಗಳ ಕಾಲ ಕಾಂಗ್ರೆಸ್ ಸರಕಾರ ಇದ್ದಾಗ ಏನು ಮಾಡಿದ್ದರು ? ಪಾದಯಾತ್ರೆ ಮಾಡುವುದರಿಂದ ಮೇಕೆದಾಟು ಯೋಜನೆ ಜಾರಿಯಾಗುತ್ತದೆಯೇ ? ಎಂದು ಪ್ರಶ್ನಿಸಿದರು.
ಯಾವುದೋ ಒಂದು ಸಣ್ಣ ತಾಂತ್ರಿಕ ಕಾರಣಕ್ಕೆ ಯೋಜನೆ ವಿಳಂಬವಾಗುತ್ತಿದೆ. ಇದಕ್ಕೆ ಪಾದಯಾತ್ರೆಯಂಥ ರಾಜಕೀಯ ಹೋರಾಟದ ಅಗತ್ಯವಿಲ್ಲ. ಕಾಂಗ್ರೆಸ್ ನವರು ಪಾದಯಾತ್ರೆ ಮಾಡಿ ರಾಜಕೀಯಗೊಳಿಸಿದರೆ ಕೇಂದ್ರ ಸರಕಾರ ಇನ್ನಷ್ಟು ವಿಳಂಬ ಮಾಡುತ್ತದೆ. ಆಗ ನಷ್ಟವಾಗುವುದು ರಾಜ್ಯಕ್ಕೆ ಎಂದು ಅಭಿಪ್ರಾಯಪಟ್ಟರು.
ರಾಜ್ಯ ಸರಕಾರಕ್ಕೆ ದುಡ್ಡಿನ ಕೊರತೆ ಇದೆ. ಹೀಗಾಗಿ ಮೇಕೆದಾಟು ಯೋಜನೆ ಜಾರಿಗೆ ಕೇಂದ್ರ ಸರಕಾರವನ್ನು ಒತ್ತಾಯಿಸುತ್ತಿಲ್ಲ. ಕೇಂದ್ರ ಸರಕಾರದ ಪರವಾನಗಿ ಇಲ್ಲದೆಯೂ ಕಾಮಗಾರಿ ಪ್ರಾರಂಭ ಮಾಡಬಹುದು. ಆದರೆ ಎರಡೂ ರಾಷ್ಟ್ರೀಯ ಪಕ್ಷಗಳು ವಿನಾಕಾರಣ ರಾಜಕಾರಣ ಮಾಡುತ್ತಿವೆ ಎಂದು ವಾಗ್ದಾಳಿ ನಡೆಸಿದರು.
ಹಿಂದೂಗಳ ಪವಿತ್ರ ಯಾತ್ರೆ ಆಗಿರುವ ಚಾರ್ ಧಾಮ್ ಯಾತ್ರೆ ಇಂದಿನಿಂದ ಆರಂಭವಾಗಲಿದೆ. ಕೇದಾರನಾಥ ಮತ್ತು ಯಮುನೋತ್ರಿ ದೇವಾಲಯಗಳು ಬೆಳಿಗ್ಗೆ 7…
ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಸಚಿವ ಎಚ್.ಡಿ ರೇವಣ್ಣ ಅವರು ನಿನ್ನೆ ಜಾಮೀನು ಸಿಗದ ಹಿನ್ನೆಲೆಯಲ್ಲಿ,…
ನೀರಿನ ಟ್ಯಾಂಕ್ನಲ್ಲಿ ಬಿದ್ದು ಮೂವರು ಎಂಜಿನಿಯರ್ಗಳು ಸಾವಿಗೀಡಾದ ಘಟನೆ ಬಳ್ಳಾರಿ ಜಿಲ್ಲೆಯ ಜಿಂದಾಲ್ನ ಎಚ್ಎಸ್ಎಂ ಪ್ಲಾಂಟ್ನಲ್ಲಿ ನಡೆದಿದೆ.
ವಿದ್ಯುತ್ ಹೈಟೆನ್ಷನ್ ವೈರ್ ತಾಕಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಚಿಕ್ಕೆನಕೊಪ್ಪ ಗ್ರಾಮದಲ್ಲಿ ನಡೆದಿದೆ.
ಕ್ರಿಕೆಟ್ ಅಸೋಸಿಯೇಷನ್ ಮೈದಾನದಲ್ಲಿ ನಡೆದ 17ನೇ ಆವೃತ್ತಿಯ 58ನೇ ಐಪಿಎಲ್ ಪಂದ್ಯದಲ್ಲಿ ಅಲ್ರೌಂಡ್ ಪ್ರದರ್ಶನದ ಫಲವಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು…
ಧರ್ಮ ದಂಗಲ್ ಕಿಡಿ ಮೈಸೂರಿನಲ್ಲಿ ಹೊತ್ತಿಕೊಂಡಿದ್ದು, ಮೈಸೂರಿನ ಸಂತ ಫಿಲೋಮಿನಾಸ್ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಹಾಡಿದ ಜಯತು ಜಯತು ಜೈ…