News Karnataka Kannada
Thursday, May 02 2024
ಬೆಂಗಳೂರು ನಗರ

ನಿಯಮ ಉಲ್ಲಂಘಿಸಿದರೆ ಕಾಲೇಜು ಪ್ರವೇಶಕ್ಕೆ ಅವಕಾಶವೇ ಇಲ್ಲ; ಬಿ‌.ಸಿ.ನಾಗೇಶ್

Bc Nagesh
Photo Credit :

ಬೆಂಗಳೂರು : ಶಿಕ್ಷಣ ಬೇಕಾದರೆ ಸರ್ಕಾರ ನಿಗದಿ ಮಾಡಿರುವ ಸಮವಸ್ತ್ರ ಧರಿಸಿ ತರಗತಿಗಳಿಗೆ ಹಾಜರಾಗಲಿ. ನಿಯಮ ಉಲ್ಲಂಘಿಸಿದರೆ ಕಾಲೇಜು ಪ್ರವೇಶಕ್ಕೆ ಅವಕಾಶವೇ ಇಲ್ಲ ಎಂದು ಶಿಕ್ಷಣ ಸಚಿವ ಬಿ‌.ಸಿ.ನಾಗೇಶ್ ಎಚ್ಚರಿಸಿದ್ದಾರೆ.

ಹಿಜಾಬ್​ ವಿವಾದ ಕುರಿತು ಶುಕ್ರವಾರ ಪ್ರತಿಕ್ರಿಯಿಸಿದ ನಾಗೇಶ್​, ಧರ್ಮ ಪಾಲನೆಗೆ ನಮ್ಮ ವಿರೋಧವಿಲ್ಲ. ಆದರೆ ಶಾಲೆಗೆ ಶಿಕ್ಷಣಕ್ಕಾಗಿ ಬರಬೇಕು. ಆ ರೀತಿ ಬರುವಾಗ ಸಮವಸ್ತ್ರ ಧರಿಸಿಯೇ ಬರಬೇಕು. ಶಿಕ್ಷಣ ಸಂಸ್ಥೆಗಳಲ್ಲಿ ಅಲ್ಲಿನ ನಿಯಮಗಳನ್ನು ಪಾಲಿಸಬೇಕು. ಈ ಸಂಬಂಧ ಹೈಕೋರ್ಟ್‌ ನೀಡುವ ತೀರ್ಪು ಆಧರಿಸಿ ಹೊಸ ನಿಯಮಗಳನ್ನು ಮಾಡುತ್ತೇವೆ. ಅಲ್ಲಿಯವರೆಗೆ ಈಗಿರುವ ನಿಯಮವೇ ಮುಂದುವರಿಯುತ್ತದೆ ಎಂದರು.

ದೇಶದ ಸಮಗ್ರತೆ ಹಾಳು ಮಾಡಲು ಪಿತೂರಿ ನಡೆಯುತ್ತಿದೆ. ಹಿಜಾಬ್‌ ವಿವಾದ ಬಳಸಿ ಘರ್ಷಣೆ ಸೃಷ್ಟಿಸುವ ಹುನ್ನಾರವೂ ನಡೆದಿದೆ ಎಂದು ಶಿಕ್ಷಣ ಸಚಿವ ನಾಗೇಶ್​ ಅಸಮಾಧಾನ ಹೊರಹಾಕಿದರು.

ಶಾಲಾ-ಕಾಲೇಜುಗಳಲ್ಲಿ ಹಿಜಾಬ್​ ನಿಷೇಧ ಮೂಲಭೂತ ಹಕ್ಕಿನ ಉಲ್ಲಂಘನೆ ಎಂದ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ಹೊರ ಹಾಕಿದ ಶಿಕ್ಷಣ ಸಚಿವರು, ರಾಜಕೀಯ ಕ್ಷೇತ್ರವನ್ನು ಹಾಳು ಮಾಡಿ ಆಗಿದೆ. ದಯವಿಟ್ಟು ಶಿಕ್ಷಣ ಕ್ಷೇತ್ರವನ್ನೂ ಹಾಳು ಮಾಡಬೇಡಿ. ಬಾಯಿಗೆ ಬಂದಂತೆ ಮಾತನಾಡಲು ಸಿದ್ದರಾಮಯ್ಯನವರಿಗೆ ನಾಚಿಕೆಯಾಗಬೇಕು. ಶಾಲೆ ಸೂಚಿಸಿದ ಯೂನಿಫಾರ್ಮ್ ಧರಿಸುತ್ತೇವೆ ಎಂದು ಮಕ್ಕಳೇ ಬರೆದುಕೊಟ್ಟಿದ್ದಾರೆ. 95 ಮಕ್ಕಳ ಪೈಕಿ 6 ಮಕ್ಕಳು ಮಾತ್ರ ಹಿಜಾಬ್ ಧರಿಸಿದ್ದಾರೆ. ಒಬ್ಬ ಲಾಯರ್ ಆಗಿ ರೂಲ್ ಬುಕ್ ಓದಿ ಸಿದ್ದರಾಮಯ್ಯನವರೇ. ನಾವೆಲ್ಲರೂ ಒಂದೇ ಎನ್ನಲು ಅವಕಾಶ ಮಾಡಿಕೊಡಿ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು