ಬೆಂಗಳೂರು, ; ಅನ್ಲೋಡ್ ಮಾಡಲು ರಸ್ತೆ ಬದಿ ನಿಲ್ಲಿಸಿದ್ದ ಕಬ್ಬಿಣ ತುಂಬಿದ್ದ ಟಾಟಾ ಏಸ್ ವಾಹನಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ನ ಟ್ಯಾಂಕ್ನಿಂದ ಪೆಟ್ರೋಲ್ ಲೀಕ್ ಆಗಿ ಬೆಂಕಿ ಹೊತ್ತಿಕೊಂಡು ಎರಡೂ ವಾಹನಗಳು ಸುಟ್ಟು ಕರಕಲಾಗಿರುವ ಘಟನೆ ಬ್ಯಾಡರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರಾತ್ರಿ ನಡೆದಿದೆ. ತಿಗಳರಪಾಳ್ಯ ರಸ್ತೆಯಲ್ಲಿನ ಬಲಮುರಿ ವಿನಾಯಕ ಟೆಂಪಲ್ ಬಳಿ ಕಬ್ಬಿಣ ತುಂಬಿದ ಟಾಟಾ ಏಸ್ ವಾಹನವನ್ನು ಅನ್ಲೋಡ್ ಮಾಡಲು ನಿಲ್ಲಿಸಲಾಗಿತ್ತು.
ನಿನ್ನೆ ರಾತ್ರಿ 12 ಗಂಟೆ ಸಮಯದಲ್ಲಿ ಬೈಕ್ನಲ್ಲಿ ಬಂದ ಇಬ್ಬರು ಟಾಟಾ ಏಸ್ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾರೆ. ಗುದ್ದಿದ ರಭಸಕ್ಕೆ ಬೈಕ್ನ ಪೆಟ್ರೋಲ್ ಟ್ಯಾಂಕ್ ಜಖಂಗೊಂಡು ಪೆಟ್ರೋಲ್ ಲೀಕ್ ಆಗಿ ಬೆಂಕಿ ಹೊತ್ತಿಕೊಂಡಿದೆ. ಇದರಿಂದ ಎರಡೂ ವಾಹನಗಳು ಸುಟ್ಟು ಹೋಗಿದ್ದು, ಬೈಕ್ನಲ್ಲಿದ್ದವರು ಪರಾರಿಯಾಗಿದ್ದಾರೆ. ಬೈಕ್ ನಂಬರ್ ಪ್ಲೇಟ್ ಸುಟ್ಟು ಹೋಗಿರುವುದರಿಂದ ಬೈಕ್ ಯಾರದ್ದು ಎಂಬುದು ಸದ್ಯಕ್ಕೆ ಗೊತ್ತಾಗಿಲ್ಲ. ಈ ಬಗ್ಗೆ ಬ್ಯಾಡರಹಳ್ಳಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಬೈಕ್ ಯಾರಿಗೆ ಸೇರಿದ್ದು, ಬೈಕ್ನಲ್ಲಿದ್ದವರು ಯಾರು ಎಂಬುದರ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
ನಿಲ್ಲಿಸಿದ್ದ ಟಾಟಾ ಏಸ್ಗೆ ಬೈಕ್ ಡಿಕ್ಕಿ ಯಾಗಿ ಎರಡೂ ವಾಹನ ಭಸ್ಮ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.