ಬೆಂಗಳೂರು : ನೀಟ್ ಪರೀಕ್ಷೆಯಿಂದ ರಾಜ್ಯದ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ. ನಮ್ಮ ರಾಜ್ಯದ ವಿದ್ಯಾರ್ಥಿಗಳಿಗೆ ಸೀಟು ಸಿಗುತ್ತಿಲ್ಲ. ನೀಟ್ ತೆಗೆದುಹಾಕಿ ಸಿಇಟಿ ಆಧಾರದಲ್ಲಿ ಸೀಟ್ ಕೊಡಲಿ. ನೀಟ್ ಬೇಡ ಸಿಇಟಿ ಪರೀಕ್ಷೆ ಜಾರಿಯಾಗಲಿ ಎಂದು ವಿಧಾನ ಸಭೆ ವಿರೋಧ ಪಕ್ಷದ ಉಪನಾಯಕ ಯುಟಿ ಖಾದರ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಕ್ರೇನ್ ಮತ್ತು ರಷ್ಯಾ ಯುದ್ಧದಿಂದ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಪರಿಣಾಮ ಬೀರಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಅವರ ಸಮಸ್ಯೆ ಬಗೆಹರಿಸಬೇಕು. ರಾಜೀವ್ ಗಾಂಧಿ ವಿವಿ ಜತೆ ಚರ್ಚೆ ಮಾಡಿ ಮಾರ್ಗ ಹುಡುಕಿಕೊಳ್ಳಬೇಕು ಎಂದು ಆಗ್ರಹಿಸಿದರು.
ಸಿದ್ದರಾಮಯ್ಯರನ್ನು ಸೋಲಿಸಲು ಕಾಂಗ್ರೆಸ್ ನಲ್ಲಿ ಪ್ಲಾನ್ ಎಂಬ ಆಶೋಕ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಖಾದರ್, ಕಾಂಗ್ರೆಸ್ ಪಕ್ಷದ ಬಗ್ಗೆ ಕಾಳಜಿ ತೋರಿಸಿದ ಆಶೋಕ್ ಗೆ ಧನ್ಯವಾದಗಳು. ಆದರೆ ನಮ್ಮಲ್ಲಿ ಯಾವುದೇ ಒಡಕಿಲ್ಲ. ನಾವು ಒಗ್ಗಟ್ಟಾಗಿದ್ದೇವೆ. ಜನರಿಗೆ ವಿರೋಧ ಪಕ್ಷದಲ್ಲಿ ಏನಾಗುತ್ತಿದೆ ಎನ್ನುವುದು ಬೇಕಿಲ್ಲ. ಆಡಳಿತ ಪಕ್ಷದಲ್ಲಿ ಏನಾಗುತ್ತಿದೆಯೆಂದು ನೋಡುತ್ತಿದ್ದಾರೆ. ಇವರು ಅಧಿಕಾರದಲ್ಲಿ ಇದ್ದಾಗ ಮೂರು ಮೂರು ಜನ ಮುಖ್ಯಮಂತ್ರಿಗಳಾಗಿದ್ದಾರೆ. ಈಗ ಇಬ್ಬರು ಮುಖ್ಯಮಂತ್ರಿಗಳಾಗಿದ್ದಾರೆ. ಜನ ಇವರ ಆಡಳಿತದಿಂದ ಬೇಸತ್ತಿದ್ದಾರೆ ಎಂದರು.
ಅಕ್ಷಯ ತೃತೀಯವನ್ನು ವೈಶಾಖ ಮಾಸದ ಶುಕ್ಲ ಪಕ್ಷದ ಮೂರನೇ ದಿನದಂದು ಈ ಹಬ್ಬವನ್ನು ಆಚರಿಸಲಾಗುತ್ತದೆ. ಅಂದಿನ ದಿನ ಭರವಸೆ, ಸಂತೋಷ,…
ಇಂದು ಅಕ್ಷಯ ತೃತೀಯ ದಿನವಾಗಿದ್ದು, ಚಿನ್ನದ ಬೆಲೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಸತತ ಏರಿಕೆಯ ಬಳಿಕ ಎರಡು ದಿನ ಸತತ ಬೆಲೆ…
ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ, ಸುಪ್ರೀಂ ಕೋರ್ಟ್ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…
ಏರ್ ಇಂಡಿಯಾ ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್ಪ್ರೆಸ್ 85 ವಿಮಾನಗಳನ್ನು…
ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.