ಬೆಂಗಳೂರು: ಪಂಚರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿಯ ಜಯಭೇರಿ ಹಿನ್ನೆಲೆಯಲ್ಲಿ ಇಂದು ಸಚಿವರು ಹಾಗೂ ಶಾಸಕರೊಂದಿಗೆ ಸಿಹಿ ಹಂಚಿ ಸಂಭ್ರಮಿಸಲಾಯಿತು.
ಮೋದಿಯವರನ್ನು ಏಕೈಕನಾಯಕರನ್ನಾಗಿ ಹೊರ ಹೊಮ್ಮಿಸಿದ್ದಾರೆ. ಈ ಮೂಲಕ ನವ ಭಾರತ ನಿರ್ಮಾಣದ ಕನಸು ಅನುಷ್ಠಾನಕ್ಕಾಗಿ ಸಕಾರಗೊಳಿಸಿದ್ದಾರೆ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಬಗ್ಗೆ ಇಂದು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಭಾರತದುದ್ದಕ್ಕೂ ಜನಮೆಚ್ಚಿದ ನಾಯಕನನ್ನಾಗಿ ಮೋದಿಯವರನ್ನು ಜನರು ಹೊರ ಹೊಮ್ಮಿಸಿದ್ದಾರೆ. ಈ ಬಾರಿಯ ಪಂಚ ರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ತಿರಸ್ಕರಿಸುವ ಮೂಲಕ, ದೂಳಿಪಟ ಮಾಡಿದ್ದಾರೆ ಎಂದರು.
ಪ್ರಧಾನಿ ನರೇಂದ್ರ ಮೋದಿಯವರು ಏಪ್ರಿಲ್ ನಲ್ಲಿ ಕರ್ನಾಟಕಕ್ಕೆ ಬರಲಿದ್ದಾರೆ. ಪಂಚರಾಜ್ಯದ ಚುನಾವಣೆಯು ರಾಜ್ಯದ ಚುನಾವಣೆಯ ಮೇಲೆ ಪ್ರಭಾವ ಬೀರಲಿದೆ. ಈ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿಸಿದಂತ ಮತದಾರರಿಗೆ, ಕಾರ್ಯಕರ್ತರಿಗೆ ಅಭಿನಂದನೆಗಳು, ಧನ್ಯವಾದಗಳನ್ನು ಸಿಎಂ ಬೊಮ್ಮಾಯಿ ಅರ್ಪಿಸಿದರು.
ಪಂಚರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿಯ ಜಯಭೇರಿ ಹಿನ್ನೆಲೆಯಲ್ಲಿ ಇಂದು ಸಚಿವರು ಹಾಗೂ ಶಾಸಕರೊಂದಿಗೆ ಸಿಹಿ ಹಂಚಿ ಸಂಭ್ರಮಿಸಲಾಯಿತು.