ಪತಿಯ ವಿರುದ್ಧ ಮಾನಸಿಕ -ದೈಹಿಕ ದೌರ್ಜನ್ಯದ ದೂರು ದಾಖಲಿಸಿದ ಮಹಿಳೆ

ಬೆಂಗಳೂರು: ಪತಿ ಮತ್ತು ಆತನ ಕುಟುಂಬಸ್ಥರ ವಿರುದ್ಧ 29 ವರ್ಷದ ಮಹಿಳೆಯೊಬ್ಬರು ಲೈಂಗಿಕ-ಮಾನಸಿಕ ದೌರ್ಜನ್ಯದ ದೂರು ದಾಖಲು ಮಾಡಿದ್ದಾರೆ.

ಕೌಟುಂಬಿಕ ದೌರ್ಜನ್ಯ ಮತ್ತು ಲೈಂಗಿಕ ಕಿರುಕುಳದ ಆರೋಪದ ಮೇಲೆ 29 ವರ್ಷದ ಮಹಿಳೆ ತನ್ನ ಪತಿ, ಅತ್ತೆಯ ಅವರ ಕುಟುಂಬಸ್ಥರ ವಿರುದ್ಧ ದೂರು ದಾಖಲಿಸಿದ್ದಾರೆ. ಹನುಮಂತನಗರ ಪೊಲೀಸರಿಗೆ ಮಹಿಳೆ ನೀಡಿದ ದೂರಿನಲ್ಲಿ, ಮದುವೆಯಾದ ತಕ್ಷಣ ತನ್ನ ಪತಿ ಮತ್ತು ಆತನ ತಂದೆಯ ಚಿಕ್ಕಮ್ಮ ಹೇಮಾ ವಿಜಯಕುಮಾರ್ ತನ್ನ ಇಚ್ಛೆಗೆ ವಿರುದ್ಧವಾಗಿ ಕನ್ಯತ್ವ ಪರೀಕ್ಷೆಗೆ ಒಳಪಡಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ದಕ್ಷಿಣ ಬೆಂಗಳೂರಿನ ನಿವಾಸಿಯಾಗಿದ್ದ ಮಹಿಳೆ ಖಾಸಗಿ ಕಂಪನಿ ಉದ್ಯೋಗಿಯಾಗಿದ್ದು, ಜ್ಞಾನಭಾರತಿಯ ನಿವಾಸಿಯಾದ ದೀಪಕ್ ಜೊತೆ ಕಳೆದ ವರ್ಷ ಆಗಸ್ಟ್ ನಲ್ಲಿ ವಿವಾಹವಾಗಿದ್ದರು. ಮದುವೆ ಬಳಿಕ ವರದಕ್ಷಿಣೆ ತರಲು ನಿರಂತರ ಬೇಡಿಕೆ ಇಟ್ಟಿದ್ದರು. ಅಲ್ಲದೆ ಪತಿಯ ತಂದೆ ನನ್ನ ಮೇಲೆ ಲೈಂಗಿಕ ಕಿರುಕುಳಕ್ಕೆ ಮುಂದಾದಾಗ ಅದಕ್ಕೆ ನನ್ನ ಪತಿ ದೀಪಕ್ ಕೂಡ ಬೆಂಬಲ ನೀಡಿದ್ದರು ಎಂದು ಆರೋಪಿಸಿದ್ದಾರೆ.

ನನ್ನ ಮಾವ ಖಾಸಗಿಯಾಗಿ ಅವರೊಂದಿಗೆ ಸಮಯ ಕಳೆಯಲು ನನ್ನನ್ನು ಒತ್ತಾಯಿಸುತ್ತಿದ್ದರು. ನಾನು ಈ ಬಗ್ಗೆ ನನ್ನ ಪತಿಗೆ ದೂರು ನೀಡಿದಾಗ, ಆತ ತನ್ನ ತಂದೆಯಷ್ಟೇ ಅಲ್ಲ, ನಾನು ಆತನ ಸ್ನೇಹಿತ ಸತೀಶ್‌ನೊಂದಿಗೆ ಸಹಕರಿಸಬೇಕು ಎಂದು ಹೇಳಿದರು ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

ಇನ್ನು ಮಹಿಳೆ ದೂರಿನ ಆಧಾರದ ಮೇಲೆ ಪೊಲೀಸರು ದೀಪಕ್, ಆತನ ತಂದೆ ಕೆಂಪನರಸಿಂಹಯ್ಯ, ಸಹೋದರ ರಕ್ಷಕ್, ಸಹೋದರಿ ಅನಿತಾ ಮತ್ತು ತಂದೆ ಚಿಕ್ಕಮ್ಮ ಹೇಮಾ ವಿಜಯಕುಮಾರ್ ವಿರುದ್ಧ ಮಂಗಳವಾರ ಪ್ರಕರಣ ದಾಖಲಿಸಿದ್ದಾರೆ. ಇದರ ಬೆನ್ನಲ್ಲೇ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದೆ.

Raksha Deshpande

Recent Posts

ವಿಧಾನಪರಿಷತ್ ಚುನಾವಣೆ : ನಾಮಪತ್ರ ಅಂಗೀಕಾರ,ತಿರಸ್ಕೃತ ಅಭ್ಯರ್ಥಿಗಳ ಪಟ್ಟಿ ರಿಲೀಸ್

ರಾಜ್ಯ ವಿಧಾನ ಪರಿಷತ್​ಗೆ ನೈಋತ್ಯ, ಈಶಾನ್ಯ, ಬೆಂಗಳೂರು ಪದವೀಧರ ಕ್ಷೇತ್ರಗಳು ಹಾಗೂ ಆಗ್ನೇಯ, ನೈಋತ್ಯ ಶಿಕ್ಷಕರ ಕ್ಷೇತ್ರ, ದಕ್ಷಿಣ ಶಿಕ್ಷಕರ…

10 mins ago

ಟಾಸ್​ ಗೆದ್ದ ಚೆನ್ನೈ ಸೂಪರ್​ ಕಿಂಗ್ಸ್​ : ಫೀಲ್ಡಿಂಗ್​ ಆಯ್ಕೆ

ಪ್ಲೇ ಆಫ್​ ಪ್ರವೇಶಕ್ಕೆ ಮಹತ್ವವಾದ ಶನಿವಾರದ ಐಪಿಎಲ್(IPL 2024)​ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಹಾಲಿ ಚಾಂಪಿಯನ್ ಚೆನ್ನೈ ಸೂಪರ್​ ಕಿಂಗ್ಸ್​​…

34 mins ago

ಶಿಕ್ಷಕ-ಪದವೀಧರ ಕ್ಷೇತ್ರದ ಅಭ್ಯರ್ಥಿಗಳ ಗೆಲುವು ನಿಶ್ಚಿತ : ಜಾರ್ಜ್

ಕಳೆದ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆ ಮಾದರಿಯಂ ತೆ, ವಿಧಾನ ಪರಿಷತ್ ಚುನಾವಣೆಯಲ್ಲೂ ಕಾರ್ಯಕರ್ತರುಗಳು ಅಭ್ಯರ್ಥಿಗಳ ಪರವಾಗಿ ಬೂತ್‌ಮಟ್ಟ ದಿಂದ…

2 hours ago

ಆಸ್ಪತ್ರೆಯಲ್ಲಿ ಶುಶ್ರೂಷಕಿಯರ ಪಾತ್ರ ಮಹತ್ವದ್ದು ಡಾ.ಮೋಹನ್‌ಕುಮಾರ್

ಆಸ್ಪತ್ರೆಯಲ್ಲಿ ಶುಶ್ರೂ?ಕಿಯರ ಪಾತ್ರ ಮಹತ್ವದ್ದು, ದಾದಿಯರು ಯಾ ವಾಗಲೂ ಹಸನ್ಮುಖಿಯರಾಗಿ ರೋಗಿಗಳ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಮಲ್ಲೇಗೌಡ ಜಿಲ್ಲಾ ಸ್ಪತ್ರೆ…

2 hours ago

ವಾಸವಿ ಯುವಜನ ಸಂಘದ ವತಿಯಿಂದ ಪ್ರಸಾದ ವಿತರಣೆ

ವಾಸವಿ ಜಯಂತಿ ಪ್ರಯುಕ್ತ ನಗರದ ಕನ್ನಿಕಾ ಪರಮೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಮಜ್ಜಿಗೆ, ಕೋಸಂಬರಿ ವಿತರಣೆ ಮಾಡಲಾಯಿತೆಂದು ವಾಸವಿ…

2 hours ago

ನಟಿ ರಶ್ಮಿಕಾ ಟ್ವೀಟ್​ಗೆ ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್ ವಿವಾದಾದ್ಮಕ ಹೇಳಿಕೆ

ನಟಿ ರಶ್ಮಿಕಾ ಮಂದಣ್ಣ ಸೋಶಿಯಲ್ ಮೀಡಿಯಾದಲ್ಲಿ ತಮ್ಮದೇ ಅದ ದೊಡ್ಡ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ವಿವಿಧ ಭಾಷೆಗಳಲ್ಲಿ ನಟಿಸಿ ಸೈ…

2 hours ago