ಬೆಂಗಳೂರು: ನಗರದಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ದಾರುಣ ಘಟನೆ ಮುತ್ಯಾಲನಗರದಲ್ಲಿ ಬೆಳಕಿಗೆ ಬಂದಿದೆ. ಪತಿ ಅನಾರೋಗ್ಯದಿಂದ ಮೃತಪಟ್ಟಿರುವುದಕ್ಕೆ ಮನನೊಂದ ಪತ್ನಿ ಹಾಗೂ ಆತನ ತಾಯಿ ಆತ್ಮಹತ್ಯೆ ಗೆ ಶರಣಾಗಿದ್ದಾರೆ.
ಮೃತರನ್ನು ಉಷಾ ಹಾಗೂ ಆತನ ತಾಯಿ ಸುಧಾ ಎಂದು ಗುರುತಿಸಲಾಗಿದೆ. ಅನಾರೋಗ್ಯದಿಂದ ಸಾವನ್ನಪ್ಪಿದ್ದ ವ್ಯಕ್ತಿಯನ್ನು ಶೇಷ ಎಂದು ಗುರುತಿಸಲಾಗಿದೆ. ಮೃತನ ಪತ್ನಿ ಹಾಗೂ ತಾಯಿ ಇಬ್ಬರೂ ವಿಷ ಸೇವಿಸಿ ಆತ್ಮ ಹತ್ಯೆ ಮಾಡಿಕೊಂಡಿದ್ದಾರೆ.
ಮೂವರ ಮೃತದೇಹಗಳನ್ನು ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಯಶವಂತಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.