News Karnataka Kannada
Monday, May 06 2024
ಬೆಂಗಳೂರು ನಗರ

ಪಾದಯಾತ್ರೆ ಮಾಡಿದರೆ ಸಿಎಂ ಆಗುತ್ತೇನೆ ಎಂಬ ಭ್ರಮೆಯಲ್ಲಿ ಡಿ.ಕೆ.ಶಿವಕುಮಾರ್ ಇದ್ದಾರೆ; ಪ್ರಹ್ಲಾದ್ ಜೋಶಿ

Lok Sabha Elections
Photo Credit : News Kannada

ಬೆಂಗಳೂರು : ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ನಡೆಸುತ್ತಿರುವ ಪಾದಯಾತ್ರೆ ಬಗ್ಗೆ ಲೇವಡಿ ಮಾಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕಾಂಗ್ರೆಸ್ ನವರಿಗೆ ಧರಣಿ, ಸತ್ಯಾಗ್ರಹ, ಪಾದಯಾತ್ರೆಗಳನ್ನು ಹೀಗೆ ಮುಂದುವರೆಸುವ ಶಕ್ತಿ ಬರಲಿ, ಮುಂದೆಯೂ ವಿಪಕ್ಷ ಸ್ಥಾನದಲ್ಲೆ ಇರಲಿ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಹ್ಲಾದ್ ಜೋಶಿ, ಕಾಂಗ್ರೆಸ್ ನಾಯಕರಿಗೆ ಇದೇ ರೀತಿ ಧರಣಿ, ಪಾದಯಾತ್ರೆ ನಡೆಸುವ ಶಕ್ತಿ ದೇವರು ಕೊಡಲಿ. ಮೇಕೆದಾಟು ಮಾತ್ರವಲ್ಲ, ಮಹಾದಾಯಿ ಪಾದಯಾತ್ರೆ ಮಾಡುವ ಉದ್ದೇಶವೂ ಕಾಂಗ್ರೆಸ್ ನಾಯಕರಿಗಿದೆ. ಪಾದಯಾತ್ರೆ ಮಾಡಿದರೆ ಸಿಎಂ ಆಗುತ್ತೇನೆ ಎಂಬ ಭ್ರಮೆಯಲ್ಲಿ ಡಿ.ಕೆ.ಶಿವಕುಮಾರ್ ಇದ್ದಾರೆ ಎಂದು ವ್ಯಂಗ್ಯವಾಡಿದರು.

ಪಾದಯಾತ್ರೆ ಮಾಡಿ ಸಿದ್ದರಾಮಯ್ಯ ಸಿಎಂ ಆಗಿದ್ದರು. ಹಾಗೇ ತಾನೂ ಕೂಡ ಪಾದಯಾತ್ರೆ ಮಾಡಿದರೆ ಸಿಎಂ ಆಗುತ್ತೇನೆ ಎಂದುಕೊಂಡಿದ್ದಾರೆ ಡಿ.ಕೆ.ಶಿವಕುಮಾರ್. ಪಾದಯಾತ್ರೆಯಿಂದ ಡಿಕೆಶಿ ಸಿಎಂ ಆಗಲ್ಲ, ಬೇಕಿದ್ದರೆ ವಿಪಕ್ಷನಾಯಕನಾಗಬಹುದು ಎಂದರು.

ಇದೇ ವೇಳೆ ಜೆಡಿಎಸ್ ಒಂದು ರಾಜಕೀಯ ಪಕ್ಷವೇ ಅಲ್ಲ ಎಂಬ ಕಾಂಗ್ರೆಸ್ ಹೇಳಿಕೆಗೂ ತಿರುಗೇಟು ನೀಡಿರುವ ಜೋಶಿ, ಜೆಡಿಎಸ್ ಕಾಂಗ್ರೆಸ್ ಜತೆ ಸರ್ಕಾರ ಮಾಡಿದರೆ ಒರಿಜಿನಲ್ ಪಕ್ಷ, ನಮ್ಮ ಜತೆ ಸರ್ಕಾರ ಮಾಡಿದರೆ ಡುಪ್ಲಿಕೇಟ್ ಪಕ್ಷವೇ? ಎಂದು ಪ್ರಶ್ನಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು