ಬೆಂಗಳೂರು: ಕೊರೊನಾ ಸೋಂಕು ತಗುಲಿರುವ ಪಾದರಾಯನಪುರ ಕಾರ್ಪೋರೇಟರ್ ಇಮ್ರಾನ್ ಪಾಷಾ ಹಾಗೂ ಅವರ ಬೆಂಬಲಿಗರ ವಿರುದ್ಧ ಜೆ.ಜೆ.ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಸ್ಪತ್ರೆಗೆ ಹೋಗುವ ವೇಳೆ ಹೆಚ್ಚು ಜನರನ್ನು ಸೇರಿಸಿದ್ದಕ್ಕೆ ಪ್ರಕರಣ ದಾಖಲಾಗಿದೆ.
ಬಿಬಿಎಂಪಿ ಆರೋಗ್ಯ ಅಧಿಕಾರಿಗಳು ನೀಡಿರುವ ದೂರಿನ ಆಧಾರದ ಮೇಲೆ ಸಾಂಕ್ರಾಮಿಕ ರೋಗ ಹರಡಲು ಪ್ರಯತ್ನಿಸಿದ ಹಾಗೂ ಅಕ್ರಮವಾಗಿ ಗುಂಪು ಸೇರಿದ್ದ ಇಮ್ರಾನ್ ಪಾಷಾ ಹಾಗೂ ಇತರರ ವಿರುದ್ಧ ಎಫ್ ಐಆರ್ ದಾಖಲಿಸಿಕೊಳ್ಳಲಾಗಿದೆ ಎಂದು ಪಶ್ಚಿಮ ವಿಭಾಘದ ಡಿಸಿಪಿ ರಮೇಶ್ ಬಾನೂತ ತಿಳಿಸಿದ್ದಾರೆ.