ಬೆಂಗಳೂರು: ರಾಜ್ಯದಲ್ಲಿ ತಜ್ಞರ ವರದಿಯನ್ನು ಆಧರಿಸಿ ಲಾಕ್ ಡೌನ್ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾಸಿಟಿವಿಟಿ ರೇಟ್ ಆಧಾರದ ಮೇಲೆ ತೀರ್ಮಾನ ಮಾಡಿದ್ದೇವೆ.
ಬೆಂಗಳೂರು ನಿತ್ಯ 500 ಕ್ಕಿಂತ ಕಡಿಮೆ ಕೋವಿಡ್ ಪ್ರಕರಣಗಳು ಬರಬೇಕು. ರಾಜ್ಯದಲ್ಲಿ ಎತಡು ಸಾವಿರ ಮೂರು ಸಾವಿರದಷ್ಟು ಕೋವಿಡ್ ಪ್ರಕರಣಗಳು ಇಳಿಕೆಯಾಗಬೇಕು. ಆಗ ಮಾತ್ರ ಲಾಕ್ ಡೌನ್ ಕೈ ಬಿಡುವ ಬಗ್ಗೆ ತೀರ್ಮಾನ ಮಾಡಬಹುದು ಎಂದರು.
ಕೋವಿಡ್ ಸಂಬಂಧಿತ ಸಚಿವರ ಸಭೆ ನಾಳೆ ಇದೆ. ಎರಡು ದಿನಕ್ಕೊಮ್ಮೆ ಚರ್ಚೆ ಮಾಡುತ್ತೇವೆ. ಜೂನ್ 5 ಅಥವಾ 6ರೊಳಗೆ ಲಾಕ್ ಡೌನ್ ಕುರಿತು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಅವರು ಹೇಳಿದರು.
ಕರ್ನಾಟಕದಲ್ಲಿ ಮೊದಲ ಬಾರಿಗೆ ದೊಡ್ಡಬಳ್ಳಾಪುರದಲ್ಲಿ ಮೇಕ್ ಶಿಪ್ಟ್ ಆಸ್ಪತ್ರೆಗೆ ತಯಾರಿ ಮಾಡಲಾಗಿದೆ. ಪೂರ್ಣ ವೈದ್ಯಕೀಯ ಸಲಕರಣೆಗಳೊಂದಿಗೆ ಆಸ್ಪತ್ರೆ ನಿರ್ಮಾಣ ಮಾಡಲಾಗುವುದು. ಆಸ್ಪತ್ರೆ ರೆಡಿಮೆಡ್ ಆಗಿ ಬರುತ್ತದೆ.
ವಾಟರ್ ಮತ್ತು ಸಾನಿಟೈಸರ್ ಕನೆಕ್ಷನ್ ಅಷ್ಟೇ ಮಾಡುತ್ತೇವೆ. ಕರ್ನಾಟಕದಲ್ಲಿ ಮೊದಲ ಬಾರಿಗೆ ಇಂತಹ ಆಸ್ಪತ್ರೆ ಆಗುತ್ತಿದೆ ಎಂದು ಅವರು ತಿಳಿಸಿದರು 100 ಹಾಸಿಗೆ ಆಸ್ಪತ್ರೆ ಇದಾಗಿದ್ದು, 70 ಹಾಸಿಗೆ ಐಸಿಯು 10 ಹಾಸಿಗೆ ವೆಂಟಿಲೇಟರ್ ಒಳಗೊಂಡಿದ್ದು, ಹದಿನೈದು ದಿನಗಳಲ್ಲಿ ಮೇಕ್ ಶಿಪ್ಟ್ ಆಸ್ಪತ್ರೆ ಸಿದ್ಧ ಮಾಡುತ್ತೇವೆ. ದೊಡ್ಡಬಳ್ಳಾಪುರ ಭಾಗದ ಜನರಿಗೆ ಈ ಆಸ್ಪತ್ರೆ ಉಪಯೋಗವಾಗುತ್ತದೆ ಎಂದರು.