ಬೆಂಗಳೂರು : ರಾಜ್ಯದಲ್ಲಿ ಪಿಯುಸಿ ಕಾಲೇಜು ಪುನಾರಂಭದ ಕುರಿತಂತೆ ಸೋಮವಾರ ಕೋರ್ಟ್ ತೀರ್ಪಿನ ಬಳಿಕ ನಿರ್ಧಾರ ಮಾಡಲಾಗುವುದು ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಇನ್ನು ಸೋಮವಾರದಿಂದ ಪ್ರೌಢಶಾಲೆ ಗಳು ಪ್ರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆಯ ಕ್ರಮ ಕೈಗೊಳ್ಳಬೇಕು. ಸೂಕ್ಷ್ಮ ಜಿಲ್ಲೆಗಳಲ್ಲಿ ಪ್ರಮುಖ ಶಾಲೆಗಳನ್ನು ಎಸ್.ಪಿ ಹಾಗೂ ಡಿ.ಸಿ ಗಳು ಭೇಟಿ ಮಾಡಬೇಕು. ಸೂಕ್ಷ್ಮ ಪ್ರದೇಶಗಳಲ್ಲಿ ಅಹಿತಕರ ಘಟನೆಗಳು ಆಗದಂತೆ ಎಚ್ಚರ ವಹಿಸಿ ಎಂದು ಸೂಚನೆ ನೀಡಿದ್ದಾರೆ.