ಬೆಂಗಳೂರು : ಇಂದು ಪುನೀತ್ ರಾಜ್ ಕುಮಾರ್ ಹುಟ್ಟುಹಬ್ಬ. ಆದರೆ ಅವರನ್ನು ಕಳೆದುಕೊಂಡಿರುವ ನೋವಿನಲ್ಲಿ ದುಃಖದಿಂದ ಹುಟ್ಟುಹಬ್ಬ ಆಚರಿಸುವಂತಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಸಿ.ಟಿ. ರವಿ, ಪುನೀತ್ ರಾಜ್ ಕುಮಾರ್ ಒಬ್ಬ ಮಾದರಿ ವ್ಯಕ್ತಿ. ಪುನೀತ್ ಅವರ ದಾರಿಯಲ್ಲಿ ನಾವೆಲ್ಲರೂ ನಡೆಯಬೇಕು. ಅದೇ ನಾವು ಅವರಿಗೆ ಕೊಡುವ ಗೌರವ ಎಂದು ಹೇಳಿದರು.
ʼಜೇಮ್ಸ್ʼ ಚಿತ್ರಕ್ಕೆ ತೆರಿಗೆ ವಿನಾಯಿತಿ ವಿಚಾರವಾಗಿ ಮಾತನಾಡಿದ ಸಿ.ಟಿ. ರವಿ, ಕಾಶ್ಮೀರ್ ಫೈಲ್ಸ್ ಹಾಗೂ ಜೇಮ್ಸ್ ಎರಡೂ ಚಿತ್ರಕ್ಕೆ ತಂದಿಡುವ ಕೆಲಸ ಮಾಡಬಾರದು. ಕಾಶ್ಮೀರಿ ಫೈಲ್ಸ್ ಸತ್ಯಾಂಶಗಳ ಮೇಲೆ ತೆಗೆದಿರುವ ಚಿತ್ರ. ಪುನೀತ್ ಅಭಿನಯದ ಜೇಮ್ಸ್ ಸಂದೇಶ ಸಾರುವ ಚಿತ್ರ. ಎರಡೂ ಚಿತ್ರಗಳನ್ನು ಬೇರೆ ಆಯಾಮದಲ್ಲಿಯೇ ನೋಡಬೇಕು ಎಂದರು.
ಜೇಮ್ಸ್ ಚಿತ್ರಕ್ಕೂ ತೆರಿಗೆ ವಿನಾಯಿತಿಯನ್ನು ಸರ್ಕಾರ ಕೊಡಲಿ. ಆದರೆ ಎರಡೂ ಸಿನಿಮಾಗಳಿಗೆ ಹೋಲಿಕೆ ಮಾಡುವುದು ಬೇಡ ಎಂದು ಹೇಳಿದರು.