ಬೆಂಗಳೂರು: ಇದೇ 7ರಂದು ಕರ್ನಾಟಕ ಪಠ್ಯಪುಸ್ತಕ ಪರಿಶೀಲನಾ ಸಮಿತಿ ಸಭೆಯು ಟಿಪ್ಪು ಸುಲ್ತಾನ್ ಕುರಿತ ಇತಿಹಾಸವನ್ನು ರಾಜ್ಯ ಸರ್ಕಾರದ ಪಠ್ಯಪುಸ್ತಕದಲ್ಲಿ ಸೇರ್ಪಡೆ ಮಾಡಬೇಕೆ ಅಥವಾ ತೆಗೆದುಹಾಕಬೇಕೆ ಎಂಬ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ವಿಜಯಪುರದ ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರತಿಕ್ರಯಿಸಿ, ಕಾಂಗ್ರೆಸ್ ನಾಯಕರು ಮತ್ತು ಕಮ್ಯೂನಿಸ್ಟ್ ಬಣಗಳು ಟಿಪ್ಪು ಸುಲ್ತಾನ್ ಕುರಿತ ಇತಿಹಾಸದ ವಿಷಯಗಳನ್ನು ತಿರುಚಿದ್ದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅದನ್ನು ಸರಿಪಡಿಸಲು ಪ್ರಯತ್ನಿಸುತ್ತಿವೆ ಎಂದಿದ್ದಾರೆ.