ಬೆಂಗಳೂರು: ಸಂಚಾರ ಪೊಲೀಸರ ತಪಾಸಣೆ ವೇಳೆ ಅಪಘಾತ ಸಂಭವಿಸಿ ಗಂಭೀರ ಗಾಯವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಯುವಕನೊಬ್ಬ ಗುರುವಾರ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.
ಮೂರು ದಿನಗಳ ಹಿಂದೆ ಒಂದು ಬೈಕ್ ನಲ್ಲಿ ಮೂವರು ತೆರಳುತ್ತಿದ್ದಾಗ ಅವರನ್ನು ಪೇದೆಯೊಬ್ಬರು ವಿಚಾರಣೆಗೆ ಅಡ್ಡ ಹಾಕಿದ್ದಾರೆ. ಈ ವೇಳೆ ಬೈಕ್ ನಿಂದ ಕೆಳಗಡೆ ಬಿದ್ದಿದ್ದಾರೆ. ಬಿದ್ದವರ ಮೇಲೆ ಟಾಟಾ ಬಸ್ ಡಿಕ್ಕಿ ಹೊಡೆದಿದೆ. ಇದರಿಂದ ಬೈಕ್ ನಲ್ಲಿದ್ದ ಕಿರಣ್, ವಿನಯ್ ಹಾಗೂ ಚೇತನ್ ಗಾಯಗೊಂಡಿದ್ದರು.
ಕೂಡಲೇ ಮೂವರನ್ನು ಬ್ಯಾಪಿಸ್ಟ್ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಚೇತನ್ ಮೃತಪಟ್ಟಿದ್ದು, ಅವರಿಗೆ ಒಂದೂವರೆ ವರ್ಷದ ಹಿಂದೆ ವಿವಾಹವಾಗಿತ್ತು. ಇವರಿಗೆ ಒಂದು ಮಗುವೂ ಇದೆ ಎನ್ನಲಾಗಿದ್ದು, ಪೊಲೀಸರ ವಿರುದ್ಧ ಕುಟುಂಬಸ್ಥರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಮೃತನ ಅಂಗಾಂಗವನ್ನು ದಾನ ಮಾಡಿದ್ದಾರೆ