ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣದಲ್ಲಿ ಕರ್ತವ್ಯ ಲೋಪ ಎಸಗಿದ್ದಾರೆ ಎಂದು ಸಲ್ಲಿಸಲಾಗಿದ್ದ ದೂರಿನ ತನಿಖೆಗೆ 8ನೇ ಎಸಿಎಂಎಂ ಕೋರ್ಟ್ ನೀಡಿದ್ದಂತ ಆದೇಶಕ್ಕೆ, ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ಸಿಡಿ ಬಹಿರಂಗ ಪ್ರಕರಣದಲ್ಲಿ ಸಾಮಾಜಿಕ ಕಾರ್ಯಕರ್ತ ಆದರ್ಶ್ ಅಯ್ಯರ್ ಎಂಬುವರು ಪೊಲೀಸರ ವಿರುದ್ಧ ಕರ್ತವ್ಯ ಲೋಪ ಎಸಗಿರೋ ಖಾಸಗಿ ದೂರು ಸಲ್ಲಿಸಿದ್ದರು. ಈ ದೂರಿನ ವಿಚಾರಣೆ ನಡೆಸಿದ್ದಂತ 8ನೇ ಎಸಿಎಂಎಂ ಕೋರ್ಟ್, ಈ ಪ್ರಕರಣದಲ್ಲಿ ಪೊಲೀಸರ ವಿರುದ್ಧ ತನಿಖೆಗೆ ಆದೇಶ ನೀಡಿತ್ತು. ಈ ಪ್ರಕರಣ ರದ್ದು ಕೋರಿ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಸೇರಿದಂತೆ ಮೂವರು ಅಧಿಕಾರಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು.
ಇಂದು ಈ ಸಂಬಂಧ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಪೀಠಕ್ಕೆ ಎಸ್ ಪಿಪಿ ಪ್ರಸನ್ನ ಕುಮಾರ್ ಅವರು ಸಿಡಿ ಬಹಿರಂಗ ಪ್ರಕರಣದ ತನಿಖೆ ಮುಕ್ತಾಯಗೊಂಡಿದೆ. ಅಂತಿಮ ವರದಿ ಸಲ್ಲಿಸೋದಕ್ಕೆ ಅನುಮತಿ ಕೋರಲಾಗಿದೆ ಎಂಬುದಾಗಿ ಮನವಿ ಮಾಡಿದರು.
ಈ ಮನವಿ ಪುರಸ್ಕರಿಸಿದಂತ ನ್ಯಾಯಪೀಠವು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ , ಡಿಸಿಪಿ ಎಂ.ಎನ್.ಅನುಚೇತ್ ಹಾಗೂ ಇನ್ಸ್ ಪೆಕ್ಟರ್ ಮಾರುತಿ ವಿರುದ್ಧದ ವಿರುದ್ಧದ ತನಿಖೆಗೆ ಮಧ್ಯಂತರ ತಡೆ ನೀಡಿದೆ.