News Karnataka Kannada
Saturday, April 27 2024
ಬೆಂಗಳೂರು ನಗರ

ಪೊಲೀಸ್ ಠಾಣೆಯ ಎದುರು ಅಸ್ಥಿಪಂಜರ ಪತ್ತೆ; ತನಿಖೆ ನಡೆಸಲು ಮುಂದಾದ ಪೊಲೀಸ್ ಸಿಬ್ಬಂದಿ

Photo Credit :

ಪೊಲೀಸ್ ಠಾಣೆಯ ಎದುರು ಅಸ್ಥಿಪಂಜರ ಪತ್ತೆ; ತನಿಖೆ ನಡೆಸಲು ಮುಂದಾದ ಪೊಲೀಸ್ ಸಿಬ್ಬಂದಿ

ಬೆಂಗಳೂರು : ಚರಂಡಿ ದುರಸ್ತಿ ವೇಳೆ ಮನುಷ್ಯನ ಅಸ್ಥಿಪಂಜರವೊಂದು ಪತ್ತೆಯಾದ ಘಟನೆ ನಗರದ ಕಾಮಾಕ್ಷಿಪಾಳ್ಯ ಸಂಚಾರ ಠಾಣೆ ಎದುರಿನಲ್ಲಿ ನಡೆದಿದೆ. ಸುಮಾರು ನಾಲ್ಕು ವರ್ಷ ಹಿಂದೆ ಸಂಭವಿಸಿದ ಘಟನೆ ಇದಾಗಿರಬಹುದು ಎಂದು ಶಂಕಿಸಲಾಗಿದೆ . ಈ ಅಸ್ತಿಪಂಜರದ ಕುರಿತಾದ ತನಿಖೆ ನಡೆಸಲಾಗುತ್ತಿದೆ ಎಂದು ವಿಜಯನಗರ ಠಾಣೆ ಪೊಲೀಸರು ತಿಳಿಸಿದ್ದಾರೆ .

ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸ್ ಠಾಣೆಯ ಮುಂದಿರುವ ಮುಚ್ಚಿದ ಮೋರಿಯಲ್ಲಿ ಕಸಗಳು ತುಂಬಿ ಚರಂಡಿ ನೀರು ಮುಂದೆ ಸಾಗುತ್ತಿಲ್ಲ ಎಂಬ ದೂರುಗಳು ಕೇಳಿ ಬರುತ್ತಿದ್ದ ಹಿನ್ನೆಲೆಯಲ್ಲಿ, ಸೋಮವಾರ ಮಧ್ಯಾಹ್ನ ಬಿಬಿಎಂಪಿ ಸಿಬ್ಬಂದಿಗಳು ಮೂರಯ . ಹೀಗಾಗಿ ಸೋಮವಾರ ಮಧ್ಯಾಹ್ನ ಬಿಬಿಎಂಪಿ ಸಿಬ್ಬಂದಿ ಮೋರಿಯ ಕಲ್ಲನ್ನು ತೆಗೆದು ಚರಂಡಿ ಸ್ವಚ್ಛಗೊಳಿಸುತ್ತಿದ್ದರು . ಆ ವೇಳೆ ಶವದ ಅಸ್ಥಿಪಂಜರ ಪತ್ತೆಯಾಗಿದ್ದು, ಕೂಡಲೇ ಬಿಬಿಎಂಪಿ ಸಿಬ್ಬಂದಿ ಪೊಲೀಸರಿಗೆ ಈ ಕುರಿತು ಮಾಹಿತಿ ನೀಡಿದ್ದರು .

ಅಸ್ಥಿಪಂಜರವನ್ನು ವಶಕ್ಕೆ ಪಡೆಯಲಾಗಿದ್ದು , ಈ ಸ್ಥಳದಲ್ಲಿನ ಮಣ್ಣನ್ನು ಕೂಡ ಸಂಗ್ರಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ . ಎರಡು ವರ್ಷಕ್ಕೂ ಹಿಂದೆಯೇ ಶವವನ್ನು ಚರಂಡಿಯಲ್ಲಿ ಹಾಕಿರಬಹುದು ಎಂದು ಪ್ರಾಥಮಿಕ ತನಿಖೆ ನಡೆಸಿದ ಪೊಲೀಸರು ತಿಳಿಸಿದ್ದಾರೆ . ಅಷ್ಟೇ ಅಲ್ಲದೆ, 4 ವರ್ಷದಿಂದ ಇತ್ತೀಚಿನವರೆಗೂ ಕಾಣೆಯಾಗಿ ಪತ್ತೆಯಾಗದೆ ಇರುವ ಪ್ರಕರಣಗಳ ಕುರಿತು ತನಿಖೆ ನಡೆಸುತ್ತೇವೆ ಎಂದು ಡಿಸಿಪಿ ತಿಳಿಸಿದ್ದಾರೆ .

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು