ಬೆಂಗಳೂರು: ಕೊರೋನಾ ಹಿನ್ನೆಲೆಯಲ್ಲಿ ಶಾಲೆಗಳನ್ನು ಪುನರಾರಂಭಿಸುವ ಬಗ್ಗೆ ಪೋಷಕರ ಜತೆ ಚರ್ಚಿಸಲಾಗುವುದು ಮತ್ತು ಅವರಿಂದ ಸಲಹೆಗಳನ್ನು ಪಡೆಯಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದರು.
ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಶಾಲೆಗಳ ಪುನರಾರಂಭಕ್ಕೆ ಮೊದಲು ಪೋಷಕರಿಂದ ಅಭಿಪ್ರಾಯ ಸಂಗ್ರಹಿಸಲಾಗುವುದು ಎಂದರು.
ಆಯಾ ಶಾಲೆಗಳಲ್ಲಿ ಪೋಷಕರು ಮತ್ತು ಶಾಲಾಭಿವೃಧ್ಧಿ ಸಮಿತಿಯು ಜೂನ್ 11ರಿಂದ ಜೂನ್ 13ರ ತನಕ ಸಭೆ ಕರೆದು ಅಭಿಪ್ರಾಯ ಸಂಗ್ರಹಿಸಬೇಕು ಎಂದರು.
ಪೋಷಕರ ಅಭಿಪ್ರಾಯವನ್ನು ಕ್ರೋಢೀಕರಿಸಿ ಕೇಂದ್ರಕ್ಕೆ ಕಳುಹಿಸಲಾಗುವುದು. ಕೇಂದ್ರವು ಇದರ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ತಿಳಿಸಿದರು.