ಬೆಂಗಳೂರು: ಬಿಜೆಪಿ ಮಾಡುತ್ತಿರುವ ಆರೋಪಗಳಿಂದ ಬೇಸತ್ತು ಹೋಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಪ್ರಧಾನಿ ನರೇಂದ್ರ ಮೋದಿ ಸಹಿತ ಹಲವರಿಗೆ ಲೀಗಲ್ ನೋಟಿಸ್ ಕಳುಹಿಸಿದ್ದಾರೆ.
ಹೂಡಿಕೆದಾರರಿಗೆ ಮೋಸ ಮಾಡುತ್ತಿರುವ ಪೋಂಜಿ ಸ್ಕೀಮ್ ನಡೆಸುತ್ತಿರುವ ಕಂಪೆನಿಗೆ ತಾನು ರಕ್ಷಣೆ ಹಾಗೂ ನೆರವು ನೀಡುತ್ತಿರುವುದಾಗಿ ಬಂದ ಆರೋಪದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ, ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಸಿದ್ದರಾಮಯ್ಯ ಸೋಮವಾರ ಲೀಗಲ್ ನೋಟಿಸ್ ನೀಡಿದ್ದಾರೆ.
ಸಿದ್ದರಾಮಯ್ಯ ಅವರು ಬಿಜೆಪಿಯ ಉನ್ನತ ನಾಯಕರಿಗೆ ಕ್ರಿಮಿನಲ್ ಮತ್ತು ಸಿವಿಲ್ ಮಾನನಷ್ಟದ ಲೀಗಲ್ ನೋಟಿಸ್ ಕೊಡಿಸಿದ್ದಾರೆ ಎಂದು ಎಎನ್ ಐ ವರದಿ ಹೇಳಿದೆ.