News Karnataka Kannada
Thursday, May 02 2024
ಬೆಂಗಳೂರು ನಗರ

ಪ್ರೀತಿ ಇರುವ ಸಭೆಗೆ ಮಾತ್ರ ಹೋಗುತ್ತೇನೆ; ರಮೇಶ್ ಜಾರಕಿಹೊಳಿ‌

Belagavi: 'I will not leave BJP at any cost'
Photo Credit :

ಬೆಂಗಳೂರು : ಅರಣ್ಯ ಸಚಿವ ಉಮೇಶ ಕತ್ತಿ ಮನೆಯಲ್ಲಿ ನಡೆದ ಬೆಳಗಾವಿ ಜಿಲ್ಲೆಯ ಬಿಜೆಪಿ ಪ್ರಮುಖ ಮುಖಂಡರ ರಹಸ್ಯ ಸಭೆ ಬಗ್ಗೆ ಬಿಜೆಪಿ ಶಾಸಕ, ಮಾಜಿ ಸಚಿವ ರಮೇಶ್ ಜಾರಕಿಹೊಳಿ‌ ಅವರು ಸೋಮವಾರ ಪ್ರತಿಕ್ರಿಯೆ ನೀಡಿದ್ದು, ನಾನು ಅಂತಹ ಸಭೆಗೆ ಹೋಗುವುದಿಲ್ಲ, ಪ್ರೀತಿ ಇರುವ ಸಭೆಗೆ ಮಾತ್ರ ಹೋಗುತ್ತೇನೆ ಎಂದು ಅಸಮಾಧಾನ ಹೊರ ಹಾಕಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಹೈಕಮಾಂಡ್ ಬಹಳ ಬುದ್ದಿ ಇದೆ.ಯಾರು ಎನ್ ಮಾಡ್ತಾರೆ ಅವರಿಗೆ ಗೊತ್ತಿದೆ.ಆವತ್ತಿನ ಸಭೆಗೆ ಕುಮಟಳ್ಳಿಗೆ ಆಹ್ವಾನ‌ ಇತ್ತು.ಅವರು ಬೆಂಗಳೂರಿನ ಲ್ಲಿ ಇದ್ದರು. ಹಾಗಾಗಿ ಹೋಗಿರಲಿಲ್ಲ ಎಂದರು.

ಸಂಪುಟ ಪುನಾರಚನೆ ಬಗ್ಗೆ ಸಿಎಂ ನಿರ್ಧಾರ ಒಪ್ಪುತ್ತೇವೆ. ಜಾರಕಿಹೊಳಿ ಬ್ರದರ್ಸ್ ಬಿಟ್ಟು ಸಭೆ ಮಾಡಿದ ವಿಚಾರ ಮಾಧ್ಯಮದ ಮೂಲಕ ಸಭೆಮಾಹಿತಿ ಬಂದಿದೆ.ಅಲ್ಲಿ ಎನು ನಡೆದಿದೆ ಅಂತ ಗೊತ್ತಿಲ್ಲದೇ ಮಾತಾಡೋದು ಸರಿಯಲ್ಲ. ಅವರು ಪಕ್ಷದ ಸಂಘಟನೆ, ಪಕ್ಷಕ್ಕೆ ಒಳ್ಳೆಯದಾಗಲಿ ಅಂತ ಸೇರಿದ್ದರೆ? ಅವರು ಹಿರಿಯರಿದ್ದಾರೆ. ನಮ್ಮ ವರಿಷ್ಠರು ಬಹಳ ಬುದ್ಧಿವಂತರಿದ್ದಾರೆ. ಊಹೆ ಮೇಲೆ ನಾನು ಮಾತಾಡೋದು ತಪ್ಪಲ್ಲವೇ ಎಂದರು.

ಇವತ್ತು ನಾನು ಮತ್ತು ಬಸವನ ಗೌಡ ಪಾಟೀಲ್ ಯತ್ನಾಳ್ ನೀರಾವರಿ ಬಗ್ಗೆ ಚರ್ಚೆಗೆ ಸೇರಿದ್ದೇವು. ಸಂಪುಟ ಪುನಾರಚನೆ ಬಗ್ಗೆ ವೈಯಕ್ತಿಕ ಅಭಿಪ್ರಾಯ ಇಲ್ಲ. ಸಿಎಂ ಭೇಟಿ ಮಾಡಿ ಅಭಿವೃದ್ಧಿ ಕುರಿತು ಮಾತಾಡಿದ್ದೆ‌. ಕ್ಷೇತ್ರದ ಶಾಸಕನಾಗಿ ಭೇಟಿ ಮಾಡೋದು ನನ್ನ ಕರ್ತವ್ಯ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು