ಬೆಂಗಳೂರು: ಬೆಂಗಳೂರು ವಿಶ್ವ ವಿದ್ಯಾನಿಲಯದ ಮಾಜಿ ಪ್ರಾಧ್ಯಾಪಕ ಪ್ರೊ.ಎನ್ ಎಸ್ ಅಶೋಕ್ ಕುಮಾರ್ ಅವರ ಆತ್ಮಹತ್ಯೆ ಬಗ್ಗೆ ತನಿಖೆ ನಡೆಸಬೇಕು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿ) ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದರು.
ಸೋಮವಾರ ಮುಂಜಾವಿನಲ್ಲಿ ಅಶೋಕ್ ಕುಮಾರ್ ಅವರು ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ತನ್ನ ಆತ್ಮಹತ್ಯೆಗೆ ಯಾರೂ ಕಾರಣರಲ್ಲ ಎಂದು ಅವರು ತನ್ನ ಡೆತ್ ನೋಟ್ ನಲ್ಲಿ ಬರೆದಿದ್ದರು.
ಅಶೋಕ್ ಕುಮಾರ್ ಅವರು ಎರಡು ಕೋಟಿ ರೂಪಾಯಿ ಬಡ್ಡಿಗೆ ಪಡೆದು ಅದನ್ನು ಉಪಕುಲಪತಿ ಹುದ್ದೆ ಪಡೆಯಲು ಲಂಚವಾಗಿ ನೀಡಿದ್ದರು. ಆದರೆ ಉಪಕುಲಪತಿ ಹುದ್ದೆ ಸಿಕ್ಕಿಲ್ಲ. ಇದು ಆತ್ಮಹತ್ಯೆಗೆ ಪ್ರಮುಖ ಕಾರಣ ಎಂದು ಡಿಕೆಶಿ ಆರೋಪಿಸಿದರು.
ರಾಜ್ಯ ಸರ್ಕಾರದಲ್ಲಿ ಇರುವವರೇ ಅಶೋಕ್ ಕುಮಾರ್ ಆತ್ಮಹತ್ಯೆಗೆ ಕಾರಣ ಎಂದು ಅವರು ಹೇಳಿದರು.