ಬೆಂಗಳೂರು: ಹಿಜಾಬ್ ಮತ್ತು ಕೇಸರಿ ಶಾಲು ಹಿನ್ನಲೆಯಲ್ಲಿ ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳು , ಪದವಿ , ಡಿಪ್ಲೋಮಾ ಮತ್ತು ಎಂಜಿನಿಯರಿಂಗ್ ಕಾಲೇಜುಗಳಿಗೆ ಉನ್ನತ ಶಿಕ್ಷಣ ಇಲಾಖೆ ನೀಡಿದ್ದ ರಜೆಯನ್ನು ಫೆಬ್ರವರಿ 16, 2022ರವರೆಗೆ ವಿಸ್ತರಿಸಿದೆ.
ಈ ಬಗ್ಗೆ ಮಾಹಿತಿ ನೀಡಿರುವಂತ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಫೆ.16ರವರೆಗೆ ರಾಜ್ಯಾಧ್ಯಂತ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪದವಿ, ಡಿಪ್ಲೋಮಾ ಮತ್ತು ಎಂಜಿನಿಯರಿಂಗ್ ಕಾಲೇಜುಗಳಿಗೆ ಭೌತಿಕ ತರಗತಿಗಳಿಗೆ ರಜೆ ಘೋಷಣೆಯನ್ನು ಉನ್ನತ ಶಿಕ್ಷಣ ಇಲಾಖೆ ಘೋಷಿಸಿದೆ ಎಂದು ತಿಳಿಸಿದ್ದಾರೆ.
ಇನ್ನೂ ಪಿಯು ಕಾಲೇಜುಗಳಿಗೆ ನಾಳೆಯಿಂದ ತರಗತಿ ನಡೆಸುವುದಾ ಅಥವಾ ರಜೆಯನ್ನು ವಿಸ್ತರಣೆ ಮಾಡುವುದಾ ಎನ್ನುವ ಬಗ್ಗೆ ಇಂದು ಶಿಕ್ಷಣ ಇಲಾಖೆಯ ತಜ್ಞರೊಂದಿಗೆ ಸಭೆ ನಡೆಸಲಾಗುತ್ತದೆ. ಆ ಬಳಿಕ ಸಿಎಂ ಬಸವರಾಜ ಬೊಮ್ಮಾಯಿ ಜೊತೆಗೆ ಚರ್ಚಿಸಿ, ಸಂಜೆ ನಿರ್ಧಾರನ್ನು ಪ್ರಕಟಿಸಲಾಗುತ್ತದೆ ಎಂಬುದಾಗಿ ಹೇಳಿದ್ದಾರೆ.