ಬೆಂಗಳೂರು : ರಾಜ್ಯದ ಅನೇಕ ಪಡಿತರ ಚೀಟಿದಾರರಿಗೆ ಬಯೋಮೆಟ್ರಿಕ್ ವರ್ಕ್ ಆಗದ ಕಾರಣ, ಪಡಿತರ ವಿತರಣೆ ಆಗದೇ ಸಮಸ್ಯೆಗೆ ಸಿಲುಕುವಂತೆ ಆಗಿತ್ತು. ಹೀಗಾಗಿ ಇನ್ಮುಂದೆ ಬಯೋಮೆಟ್ರಿಕ್ ವರ್ಕ್ ಆಗದೇ ಇದ್ದರೂ ಪಡಿತರ ವಿತರಣೆ ಮಾಡಲಾಗುತ್ತದೆ ಎಂಬುದಾಗಿ ಸರ್ಕಾರ ತಿಳಿಸಿದೆ.
ವಿಧಾನಪರಿಷತ್ತಿನಲ್ಲಿ ಸೋಮವಾರ ಸದಸ್ಯ ಎಸ್ ರವಿ ಪ್ರಶ್ನೆಗೆ ಉತ್ತರಿಸಿದಂತ ಸಭಾ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಅವರು, ವಯೋವೃದ್ಧರೂ ಸೇರಿದಂತೆ ಕೆಲವು ಕಾರ್ಮಿಕರ ಬೆರಳು ಸವೆದು ಬಯೋಮೆಟ್ರಿಕ್ ಪಡೆಯಲು ಆಗುತ್ತಿಲ್ಲ. ಹೀಗೆ ತೊಂದರೆಯಾಗುವಂತವರಿಗೆ ಬಯೋಮೆಟ್ರಿಕ್ ಹೊರತುಪಡಿಸಿ, ಪಡಿತರ ವಿತರಣೆ ಮಾಡಲಾಗುತ್ತದೆ ಎಂದರು.
ರಾಜ್ಯದಲ್ಲಿ ಬಯೋಮೆಟ್ರಿಕ್ ಹೊರತುಪಡಿಸಿ ಶೇ.2ರಷ್ಟು ಫಲಾನುಭವಿಗಳಿಗೆ ಪಡಿತರ ಹಂಚಿಕೆಗೆ ಅವಕಾಶವಿದೆ. ಅಗತ್ಯಬಿದ್ದರೇ, ಅದನ್ನು ಇನ್ನಷ್ಟು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.