News Karnataka Kannada
Saturday, May 04 2024
ಬೆಂಗಳೂರು ನಗರ

ಬಲವಂತದ ಮತಾಂತರಕ್ಕೆ ಅವಕಾಶವಿಲ್ಲ: ಗೃಹ ಸಚಿವ ಆರಗ ಜ್ಞಾನೇಂದ್ರ

Complaint filed against Araga Gyanendra for comments on Kharge's complexion
Photo Credit :

ಬೆಂಗಳೂರು: ಮತಾಂತರ ನಿಷೇಧ ಕಾಯಿದೆ ಯಾವುದೇ ಧರ್ಮದ ವಿರುದ್ಧ ರೂಪಿತವಾಗಿಲ್ಲ. ಆದರೆ ಯಾವುದೇ ರೀತಿಯ ಆಮಿಷ ಅಥವಾ ಬಲವಂತದ ಮತಾಂತರಕ್ಕೆ ಅವಕಾಶವಿಲ್ಲ, ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟ ಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಬೆಳಗಾವಿ ಅಧಿವೇಶನದಲ್ಲಿ ಮಂಡಿಸಲಾದ ಮತಾಂತರ ನಿಷೇಧ (ತಿದ್ದುಪಡಿ) ವಿಧೇಯಕಕ್ಕೆ ವಿಧಾನ ಸಭೆಯಿಂದ ಅಂಗೀಕಾರ ಪಡೆಯಲಾಗಿದೆ.

ಮೇಲ್ಮನೆಯಲ್ಲಿ ಮಂಡಿತವಾಗಿರುವ ಮಸೂದೆಗೆ ಮುಂದಿನ ಅಧಿವೇಶನದಲ್ಲಿ ಒಪ್ಪಿಗೆ ಪಡೆಯಲಾಗುವುದು ಎಂದ ಸಚಿವರು, ಪ್ರಸಕ್ತ ಸರ್ಕಾರವು ಹೊರಡಿಸಿದ ಸುಗ್ರೀವಾಜ್ಞೆಗೆ ರಾಜ್ಯಪಾಲರ ಸಮ್ಮತಿ ನಿರೀಕ್ಷಿಸಿದ್ದೇವೆ ಎಂದರು.

ಸುಗ್ರೀವಾಜ್ಞೆಯನ್ನು ಬಲವಾಗಿ ಸಮರ್ಥಿಸಿದ ಸಚಿವರು, ಸಮಾಜದಲ್ಲಿ ಶಾಂತಿ ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದರು.

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಚಿವರು, ಕ್ರೈಸ್ತ ಧಾರ್ಮಿಕ ಮುಖಂಡರು, ರಾಜ್ಯಪಾಲರನ್ನು ಭೇಟಿಯಾಗಿ ಮತಾಂತರ ಮಸೂದೆ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಆದರೆ ಸಂವಿದಾನ ದತ್ತವಾಗಿ ಇರುವ ಧಾರ್ಮಿಕ ಹಕ್ಕುಗಳನ್ನು ಮೊಟಕುಗೊಳಿಸುವ ಯಾವುದೇ ಪ್ರಸ್ತಾಪವವೂ ತಿದ್ದುಪಡಿ ಮಸೂದೆಯಲ್ಲಿ ಇಲ್ಲ ಎಂದರು.

ತಿದ್ದುಪಡಿ ಮಸೂದೆ ಬಗ್ಗೆ, ಸದನದಲ್ಲಿ ವಿವರವಾಗಿ ಚರ್ಚಿಸಲಾಗಿದೆ, ಶಾಸಕರೊಬ್ಬರು ಮತಾಂತರ ಹಾವಳಿ ಸೃಷ್ಟಿಸಿದ ಕುಟುಂಬಗಳ ನಡುವಿನ ಘರ್ಷಣೆಗಳ ಕುರಿತೂ ಪ್ರಸ್ತಾಪಿಸಿದ್ದನ್ನೂ ನೆನಪಿಸಿದ ಸಚಿವರು, ಸುಗ್ರೀವಾಜ್ಞೆಗೆ ಸಮ್ಮತಿ ಸಿಕ್ಕಿದ ನಂತರ, ಕಾನೂನನ್ನು ಪರಿಣಾಮಕಾರಿ ಯಾಗಿ ಜಾರಿಗೆ ತರಲಾಗುವುದು ಎಂದರು.

ಈ ಹಿಂದೆ ಕಾಂಗ್ರೆಸ್ ಸರಕಾರ ಮತಾಂತರ ನಿಷೇಧ ಕಾಯಿದೆ ತಂದಿದ್ದನ್ನು ನೆನಪಿಸಿದ ಸಚಿವರು ‘ನಮ್ಮ ಸರ್ಕಾರ ಆ ವಿಧೇಯಕ ವನ್ನು ಮತ್ತಷ್ಟು ಬಲಗೊಳಿಸಿದ್ದಲ್ಲದೆ ಕಟ್ಟು ನಿಟ್ಟಾಗಿ ಜಾರಿಗೆ ತರಲು ಬದ್ಧವಾಗಿದೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು