News Karnataka Kannada
Monday, April 29 2024
ಬೆಂಗಳೂರು ನಗರ

ಬಸವರಾಜ್‌ ಹೊರಟ್ಟಿ ಬಿಜೆಪಿಗೆ ಬಂದಿರುವುದು ಪಕ್ಷಕ್ಕೆ ಆನೆ ಬಲ ಬಂದಿದೆ: ಸಿಎಂ

Cm Bommai
Photo Credit :

ಬೆಂಗಳೂರು: ಬಸವರಾಜ್‌ ಹೊರಟ್ಟಿ ಅವರು 45 ವರ್ಷದಿಂದ ವಿಧಾನಪರಿಷತ್ ಸದಸ್ಯರಾಗಿ ಸಭಾಪತಿಗಳಾಗಿ, ಮಂತ್ರಿಗಳಾಗಿ, ಅಪಾರವಾದ ಅನುಭವ ಇರುವ ಒಬ್ಬ ಹಿರಿಯ ನಾಯಕ. ಅವರು ತಮ್ಮದೆ ಆದೆ ಶಕ್ತಿಯನ್ನು ವಿಶೇಷವಾಗಿ ಕಾಲೇಜು, ಹೈಸ್ಕೂಲ್ ಶಿಕ್ಷಕರನ್ನ ಸಂಘಟನೆ ಮಾಡಿ ಅವರ ಸಮಸ್ಯೆಯನ್ನು ನಿರಂತರ ಬಗೆಹರಿಸಿಕೊಂಡು ಬಂದವರು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಬಸವರಾಜ ಹೊರಟ್ಟಿ ಅವರು ಪಕ್ಷಕ್ಕೆ ಬರಮಾಡಿಕೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊರಟ್ಟಿ ಅವರು ದೊಡ್ಡ ಹೋರಾಟಗಾರರು. ಅವರು ನಮ್ಮ ಪಕ್ಷಕ್ಕೆ ಸೇರಬೇಕು ಅನ್ನುವ ತೀರ್ಮಾನ ಮಾಡಿ, ನಾಯಕರಾದ ಅಮಿತ್ ಶಾ ಅವರನ್ನು ಭೇಟಿ ಮಾಡಿ, ಎಲ್ಲ ಪ್ರಕ್ರಿಯೆ ಈಗ ಮುಗಿದಿದೆ. ಸಭಾಪತಿ ಸ್ಥಾನಕ್ಕೆ,ಪರಿಷತ್ ಸ್ಥಾನಕ್ಕೆ ರಾಜೀನಾಮೆ ಅಂಗೀಕಾರವಾದ ಮೇಲೆ ಅಧಿಕೃತವಾಗಿ ಬಿಜೆಪಿಗೆ ಸೇರಿದ್ದಾರೆ ಎಂದರು.

ಹುಬ್ಬಳ್ಳಿಯಲ್ಲಿ ಬೃಹತ್ ಕಾರ್ಯಕ್ರಮ ಮಾಡಿ, ಆ ಭಾಗದಲ್ಲಿ ಪಕ್ಷಕ್ಕೆ ಸ್ವಾಗತ ಮಾಡುತ್ತೇವೆ ಅವರು ಬಿಜೆಪಿಗೆ ಬಂದಿರುವುದು ಪಕ್ಷಕ್ಕೆ ಆನೆ ಬಲ ಬಂದಿದೆ. ಬಹಳ ಸುದೀರ್ಘಾದ ಸಾರ್ವಜನಿಕ ಜೀವನ ಅವರದ್ದು, ಇಷ್ಟು ನಿರಂತರವಾಗಿ ವಿಧಾನಪರಿಷತ್ ಪ್ರತಿನಿಧಿಯಾಗಿ ದಾಖಲೆ ಇದೆ. ಆದರೆ ದೇಶದಲ್ಲಿ ಆ ರೀತಿಯ ದಾಖಲೆ ಇಲ್ಲ. ಒಬ್ಬ ಹಿರಿಯ ನಾಯಕರನ್ನು ಬರಮಾಡಿಕೊಂಡಿರುವುದು ಬಹಳ ಸಂತೋಷ ಆಗಿದೆ ಎಂದರು.

ಹೊರಟ್ಟಿ ಅವರಿಗೆ ಎಲ್ಲ ವರ್ಗದ ಜನ ಸಂಪರ್ಕ ಇದೆ. ವಿಶೇಷ ಉತ್ತರ ಕರ್ನಾಟಕ ಭಾಗಕ್ಕೆ ಶಕ್ತಿ ಬಂದಿದೆ. ಅವರಿಗೆ ಎಲ್ಲಾ ಅವಕಾಶ ಮಾಡಿಕೊಡುತ್ತೇವೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು