ಬೆಂಗಳೂರು: ಮಾಜಿ ಶಾಸಕ ಮಲ್ಲಿಕಾರ್ಜುನ ಖುಬಾ ಅವರು ಬಸವ ಕಲ್ಯಾಣ ವಿಧಾನಸಭೆಯಿಂದ ಭಾರತೀಯ ಜನತಾ ಪಕ್ಷ(ಬಿಜೆಪಿ)ದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವರು.
ಒಂದು ವರ್ಷದ ಮೊದಲು ಶಾಸಕ ನಾರಾಯಣ ರಾವ್ ಅವರು ಕೋವಿಡ್-19ನಿಂದಾಗಿ ಮೃತಪಟ್ಟ ಹಿನ್ನೆಲೆಯಲ್ಲಿ ಇಲ್ಲಿ ಉಪಚುನಾವಣೆಯು ನಡೆಯುತ್ತಲಿದೆ.
ಜೆಡಿಎಸ್ ನಲ್ಲಿದ್ದ ಖುಬಾ 2018ರಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದರು. ಪಕ್ಷದಿಂದ ಟಿಕೆಟ್ ಸಿಗಬಹುದೆಂದು ಅವರು ನಿರೀಕ್ಷೆಯಲ್ಲಿದ್ದರು. ಆದರೆ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಬಂಡಾಯವಾಗಿ ಸ್ಪರ್ಧಿಸಿರುವರು.