ಬೆಂಗಳೂರು: ರಾಜ್ಯ ಸರ್ಕಾರವು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಪ್ರಯಾಣ ದರ ಏರಿಕೆಯನ್ನು ತಾತ್ಕಾಲಿಕವಾಗಿ ತಡೆಹಿಡಿದಿದೆ.
ಸೋಮವಾರ ಮಧ್ಯರಾತ್ರಿಯಿಂದ ಶೇ.18ರಷ್ಟು ಏರಿಕೆಯಾಗಬೇಕಿದ್ದ ಪ್ರಯಾಣದರವನ್ನು ತಡೆಹಿಡಿಯಲಾಗಿದೆ ಎಂದು ಹೇಳಲಾಗಿದೆ. ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರ ಆದೇಶದ ಮೇರೆಗೆ ಬಸ್ ಪ್ರಯಾಣ ದರ ಏರಿಕೆ ತಡೆಹಿಡಿಯಲಾಗಿದೆ ಎಂದು ಕೆಎಸ್ ಆರ್ ಟಿಸಿ ಮೂಲಗಳು ತಿಳಿಸಿವೆ.
ಇಂಧನಬೆಲೆ ಏರಿಕೆ ಮತ್ತು ಇತರ ವೆಚ್ಚಗಳು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಬಸ್ ಪ್ರಯಾಣದರವು ಅನಿವಾರ್ಯವಾಗಿದೆ ಎಂದು ಕೆಎಸ್ ಆರ್ ಟಿಸಿ ಹೇಳಿದೆ.