ಬೆಂಗಳೂರು : ಹಿಜಾಬ್ ವಿವಾದವನ್ನು ಬಿಜೆಪಿಗರು ದೊಡ್ಡದು ಮಾಡ್ತಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ, ಸಮವಸ್ತ್ರ ಕಡ್ಡಾಯ ಮಾಡಬೇಕು ಎಂದು ಎಲ್ಲೂ ಹೇಳಿಲ್ಲ.
ಇದು ಸಂವಿಧಾನದಲ್ಲಿ ನೀಡಿರೋ ಮೂಲಭೂತ ಹಕ್ಕು. ಇನ್ನು ಈ ವಿವಾದಕ್ಕೆ ಸಂಬಂಧಪಟ್ಟಂತೆ ಕಾಲೇಜು ಗೇಟು ಮುಚ್ಚಿದ್ದು ತಪ್ಪು.
ಇದರಿಂದ ವಿದ್ಯಾಭ್ಯಾಸಕ್ಕೆ ತೊಂದರೆ ಆಗುತ್ತದೆ. ಶಿಕ್ಷಣದಲ್ಲಿ ರಾಜಕೀಯ ಬೆರೆಸಬೇಡಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.