ಬೆಂಗಳೂರು (ಡಿ. 12): ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದ ಬಿಟ್ ಕಾಯಿನ್ ಹಗರಣದ ಮಾಸ್ಟರ್ ಮೈಂಡ್ ಶ್ರೀಕಿ ಬೇಲ್ ಪಡೆದು ಹೊರಬಂದು ನಾಪತ್ತೆಯಾಗಿದ್ದಾನೆ. 2 ವಾರಕ್ಕೊಮ್ಮೆ ತನಿಖಾಧಿಕಾರಿ ಮುಂದೆ ಹಾಜರಾಗಲು ಕೋರ್ಟ್ ಷರತ್ತು ವಿಧಿಸಿತ್ತು.
ಜಾಮೀನು ಸಿಕ್ಕ ನಂತರ ತಿಂಗಳಾಯಿತು. ಇನ್ನೂ ವಿಚಾರಣೆಗೆ ಹಾಜರಾಗಿಲ್ಲ. ಜಾಮೀನು ರದ್ದು ಕೋರಿ ಪೊಲೀಸರು ಕೋರ್ಟ್ಗೆ ಅರ್ಜಿ ಸಲ್ಲಿಸಲಿದ್ದಾರೆ.