News Karnataka Kannada
Friday, May 17 2024
ಬೆಂಗಳೂರು ನಗರ

ಬಿಬಿಎಂಪಿ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಘಟನೆಗಳ ಕುರಿತು ಮಾಜಿ ಸಚಿವ ಶಾಸಕ ಯು.ಟಿ.ಖಾದರ್ ಹೇಳಿಕೆ

Photo Credit :

ಬಿಬಿಎಂಪಿ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಘಟನೆಗಳ ಕುರಿತು ಮಾಜಿ ಸಚಿವ ಶಾಸಕ ಯು.ಟಿ.ಖಾದರ್  ಹೇಳಿಕೆ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ 8 ವಲಯಗಳಿದ್ದು ಅದರಲ್ಲಿ ಬೆಂಗಳೂರು ದಕ್ಷಿಣ ವಲಯ ವಾರ್ ರೂಮ್ ಜವಾಬ್ದಾರಿ ತುಳಸಿ ಮದ್ದೇನಿ ಮತ್ತು ವೀರಭದ್ರಯ್ಯ ಅವರದ್ದಾಗಿದ್ದು ದಕ್ಷಿಣ ವಲಯಕ್ಕೆ ಸಂಬಂಧಿಸದ ಸರ್ಪರಾಜ್ ಖಾನ್ ಅವರ ವಿರುದ್ದ ಆರೋಪ ಮಾಡಿದ್ದು ಏಕೆ? ಎಂದು ಮಾಜಿ ಸಚಿವ ಶಾಸಕ ಯು.ಟಿ.ಖಾದರ್ ಪ್ರಶ್ನಿಸಿದ್ದಾರೆ.

 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತುಳಸಿ ಮದ್ದೇನೇನಿ ಹಾಗೂ ವೀರಭದ್ರಯ್ಯ ನವರೇ ಜಾಹಿರಾತು ಕರೆದು ಅರ್ಜಿ ಸ್ವೀಕರಿಸಿ ವಾಕಿನ್ ಇಂಟರ್ವ್ಯೂ ನಡೆಸಿ 214 ಸಿಬ್ಬಂದಿ ನೇಮಕಾತಿ ಮಾಡಿದ್ದಾರೆ. ಆ ಪೈಕಿ 17 ಮಂದಿ ಮಾತ್ರ ಅಲ್ಪಸಂಖ್ಯಾತಸಮುದಾಯಕ್ಕೆ ಸೇರಿದವರು, ಹಾಗೇ 7 ರಿಂದ 8 ವೈದ್ಯರ ಪೈಕಿ 1 ಇಬ್ಬರು ಮಾತ್ರ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದವರು. ಈಗಿರುವವಾಗ ಪ್ರಕರಣದಲ್ಲಿ ಒಂದು ಸಮುದಾಯವನ್ನೇ ಗುರಿಯಾಗಿರಿಸಿ ಹೆಸರು ಪ್ರಸ್ತಾಪಿಸಿರುವ ಹಿಂದಿನ ಉದ್ದೇಶ ಏನು ಎಂದು ಕೇಳಿದ್ದಾರೆ. 

 

ಅಷ್ಟೇ ಅಲ್ಲದೆ, ಈಗ ಆಗುತ್ತಿರುವ ಕೆಲಸ ಕಾಲ್ ಸೆಂಟರ್ ಮಾದರಿ ಕೆಲಸವಾಗಿದ್ದು ಕರೆ ಸ್ವೀಕರಿಸಿ ಮಾಹಿತಿ ನೀಡುವದಷ್ಟೇ. ಇಷ್ಟಕ್ಕೂ

ಈ ಅಧಿಕಾರಿಗಳು ವಾಕಿನ್ ಇಂಟರ್ ವ್ಯೂ ಮಾಡಿದಾಗ ನಿಮಗೆ ಮಾಹಿತಿ ಇರಲಿಲ್ಲವೇ? ದಕ್ಷಿಣ ವಲಯದ‌ ಸಂಭಂಧಿಸಿದ ಅಧಿಕಾರಿ ಯಾರು ಎಂಬುದು ನಿಮಗೆ ಗೊತ್ತಿರಲಿಲ್ಲವೇ? ಮಾಹಿತಿ ಇಲ್ಲದೇ ಮಾತನಾಡಿದ್ದರೆ ಅದು ನಿಮ್ಮ ಅಪ್ರಬುದ್ದತೆ ತೋರಿಸುತ್ತದೆ ಸಂಸದರಾಗಿರುವವರಿಗೆ ಮಾಹಿತಿಯ ಕೊರತೆ ಇದೆ ಎಂಬ ಸಂದೇಶ ರವಾನೆಯಾಗುತ್ತದೆ.ಇನ್ನೂ ವಿಚಾರ ಗೊತ್ತಿದ್ದು ಗೊತ್ತಿಲ್ಲದವರಂತೆ ಆರೋಪಿಸಿರುವುದರ ಹಿಂದಿನ ದುರುದ್ದಶವೇನು? ಎಂದಿದ್ದಾರೆ. 

 

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು