ಬೆಂಗಳೂರು: ಬಿಬಿಎಂಪಿ ಸದಸ್ಯೆಯಾದ ಮಹದೇವಮ್ಮ ನಾಗರಾಜ್ ಅವರು ಇಂದು ಹೃದಯಾಘಾತವಾಗಿ ತಿರುಪತಿಯಲ್ಲಿ ನಿಧನರಾಗಿದ್ದಾರೆ.
ವಾರ್ಡ್ 121 ಬಿನ್ನಿಪೇಟೆಯ ಸದಸ್ಯೆಯಾಗಿದ್ದು, ಇವರು ಕುಟುಂಬ ಸಮೇತ ತಿರುಪತಿಗೆ ತೆರಳಿದ್ದರು. ಇಂದು ಮುಂಜಾನೆ ದೇವಸ್ಥಾನದಿಂದ ವಾಪಾಸ್ಸಾಗುತ್ತಿದ್ದ ವೇಳೆ ಮಾರ್ಗ ಮಧ್ಯದಲ್ಲಿ ಇವರಿಗೆ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಕುಟುಂಬಸ್ಥರು ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯದಲ್ಲೇ ಕೊನೆಯುಸಿರೆಳೆದಿದ್ದಾರೆ.
ಬಿಬಿಎಂಪಿ ಮೇಯರ್, ಆಯುಕ್ತರು, ಪಾಲಿಕೆ ಸದಸ್ಯರು ಮಹದೇವಮ್ಮ ಅವರ ಸಾವಿಗೆ ಸಂತಾಪ ಸೂಚಿಸಿದ್ದಾರೆ.