ಬೆಂಗಳೂರು: ಕಳೆದ ಬುಧವಾರ ಬೀದಿ ನಾಐಇಗಳ ದಾಳಿಗೆ ತುತ್ತಾಗಿ ಗಂಭೀರವಾದ ಗಾಯವಾದ ಬಾಲಕ ಪ್ರವೀಣ್ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ವಿಭೂತಿತಿಪುರದಲ್ಲಿ ನಾಐಇಗಳ ದಾಳಿಗೆ ತುತ್ತಾದ ಪ್ರವೀಣ್ ನನ್ನು ಸ್ಥಳೀಯರು ರಕ್ಷಿಸಿ ಮಣಿಪಾಳ ಆಸ್ಪತ್ರೆಗೆ ದಾಖಲಿಸಿದ್ದರು. ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಲಕ ಪ್ರವೀಣ್ ಇದೀಗ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ.
ಮೃತ ಬಾಲಕ ಪ್ರವೀಣ್ ಮುರಗಮ್ಮ ಹಾಗೂ ಮನೋಜ್ ದಂಪತಿಯ ಮಗನಾಗಿದ್ದು, ಮಣಿಪಾಲ್ ಆಸ್ಪತ್ರೆಯಲ್ಲೇ ಪ್ರವೀಣ್ ಪೋಷಕರು ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದರು.
ಘಟನೆ ಹಿನ್ನೆಲೆ: ಬುಧವಾರ ತನ್ನ ಸ್ನೇಹೊಇತರೊಂಗಿ ಪ್ರವೀಣ್ ಈಜಲು ಹೋಗಿದ್ದ. ಈ ವೇಳೆ ಬಾಲಕನ ಮೇಲೆ ಸುಮಾರು 10 ಕ್ಕೂ ಹೆಚ್ಚು ನಾಯಿಗಳು ದಾಳಿ ನಡೆಸಿವೆ. ದಾಳಿಗೆ ಕತ್ತು, ಮೈ ಹಾಗೂ ಕೈ ಭಾಗಕ್ಕೆ ಕಚ್ಚಿ ಗಂಭೀರವಾಗಿ ಗಾಯಗೊಳಿಸಿವೆ. ಇದನ್ನು ಕಂಡ ಸ್ಥಳೀಯರು ನಾಯಿಗಳನ್ನು ಓಡಿಸಿ, ಗಂಭೀರವಾಗಿ ಗಾಯಗೊಂಡಿದ್ದ ಬಾಲಕನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆತನ ಸ್ಥತಿ ಚಿಂತಾಜನಕವಾಘಿದೆ ಎಂದು ವೈದ್ಯರು ತಿಳಿಸಿದ್ದರು.
ಮೂವರ ಬಂಧನ: ಬಾಲಕ ಪ್ರವೀಣ್ ಮೇಲಿನ ಬೀದಿ ನಾಯಿಗಳ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಬಿಬಿಎಂಪಿ ಅಧಿಕಾರಿ ಹಾಗೂ ಗುತ್ತಿಗೆದಾರ ಸೇರಿ ಮೂವರನ್ನು ಹೆಚ್ಎಎಲ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ವ್ಯಕ್ತಿಗಳನ್ನು ಮಹದೇವಪುರವಲಯದ ಸಹಾಯಕ ನಿರ್ದೇಶಕ (ಪಶುಪಾಲನೆ) ಡಾ.ಶ್ರೀರಾಮ್, ಹಿರಿಯ ಪಶುವೈದ್ಯಕೀಯ ಪರೀಕ್ಷಕ ಅರುಣ್ ಮುತಾಲಿಕ್ ದೇಸಾಯಿ ಹಾಗೂ ಗುತ್ತಿಗೆದಾರ ರವಿಶಂಕರ್ ಬಂಧಿತರಾಗಿದ್ದಾರೆ.
ವಿಭೂತಿಕೆರೆ ಸಮೀಪ ಪ್ರವೀಣ್ ಮೇಲೆ ನಾಯಿ ದಾಳಿ ಮಾಡಿದ ಸಂಬಂಧಿಸಿದಂತೆ ಆತನ ತಾಯಿ ದೂರು ನೀಡಿದ್ದರು.
ಬೀದಿ ನಾಯಿಗಳಿಗೆ ಸಂತಾನಶಕ್ತಿ ಹರಣ ಶಸ್ತ್ರ ಚಿಕಿತ್ಸೆ ಮಾಡಿಸುವುದು ಹಾಗೂ ಅವುಗಳಿಗೆ ರೋಗ ನಿರೋಧಕ ಚುಚ್ಚು ಮದ್ದು ಹಾಕಿಸುವ ವಿಷಯದಲ್ಲಿ ಈ ಮೂವರು ನಿರ್ಲಕ್ಷ್ಯತನ ತೋರಿಸಿದ್ದರಿಂದ ನಾಯಿ ದಾಳಿಗೆ ಕಾರಣ ಎಂದು ದೂರಿದ್ದರು.
ಈ ಹಿನ್ನಲೆಯಲ್ಲಿ ಪ್ರಾಣಿಗಳ ಸಂರಕ್ಷಣೆ ವಿಷಯದಲ್ಲಿ ನಿರ್ಲಕ್ಷ್ಯತನ ತೋರಿದ (ಐಪಿಸಿ 289) ಹಾಗೂ ಆಜಾಗರೂಕತೆಯಿಂದ ಪ್ರಾಣಕ್ಕೆ ಸಂಚಕಾರ ತಂದ (338) ಆರೋಪಗಳಡಿ ಎಫ್ಐಆರ್ ದಾಖಲಾಗಿದೆ.