ಬೆಂಗಳೂರು: ಯುವತಿಯನ್ನು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಹತ್ಯೆ ಮಾಡಿರುವ ಆರೋಪ ಕೇಳಿಬಂದಿದೆ. ವಿಜಯಪುರದ ಮೂಲದ ದಾನೇಶ್ವರಿ(25) ಮೃತಪಟ್ಟವರು ಎಂದು ಹೇಳಲಾಗಿದೆ.
ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ.ದಾನೇಶ್ವರಿ ಪ್ರಿಯಕರ ಶಿವು ಹತ್ಯೆ ಮಾಡಿರುವುದಾಗಿ ಯುವತಿ ಸಹೋದರಿಯ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ದಾನೇಶ್ವರಿ ಅವರನ್ನು ಮದುವೆಯಾಗಲು ಒಪ್ಪದೇ ಶಿವು ತಪ್ಪಿಸಿಕೊಳ್ಳುತ್ತಿದ್ದ. ಮದುವೆ ವಿಚಾರ ತೆಗೆದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದು, ಇದೇ ವಿಚಾರಕ್ಕೆ ತನ್ನ ಸಹೋದರಿಯನ್ನು ಶಿವು ಕರೆಸಿಕೊಂಡಿದ್ದಾನೆ.
ಎಲೆಕ್ಟ್ರಾನಿಕ್ ಸಿಟಿ ನಿರ್ಜನ ಪ್ರದೇಶಕ್ಕೆ ಕರೆಸಿಕೊಂಡು ಬೆಂಕಿ ಹಚ್ಚಿದ್ದಾರೆ. ಶಿವು ಹಾಗೂ ಆತನ ಸ್ನೇಹಿತರು ಸೇರಿಕೊಂಡು ಹತ್ಯೆ ಮಾಡಿದ್ದಾರೆ ಎಂದು ದಾನೇಶ್ವರಿ ಕುಟುಂಬದವರಿಂದ ಗಂಭೀರ ಆರೋಪ ಮಾಡಲಾಗಿದೆ. ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆನ್ನಲಾಗಿದೆ.