ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಜೊತೆ ಜೊತೆಗೆ ಓಮಿಕ್ರಾನ್ ಮಹಾಸ್ಪೋಟವೇ ಉಂಟಾಗುತ್ತಿದೆ. ಇಂದು ಹೊಸದಾಗಿ 287 ಮಂದಿಗೆ ಓಮಿಕ್ರಾನ್ ಸೋಂಕು ದೃಢಪಟ್ಟಿದೆ.
ಈ ಕುರಿತಂತೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು, ಬೆಂಗಳೂರಿನಲ್ಲಿ ಇಂದು ಹೊಸದಾಗಿ 287 ಜನರಿಗೆ ಓಮಿಕ್ರಾನ್ ಸೋಂಕು ದೃಢಪಟ್ಟಿದೆ. ಹೀಗಾಗಿ ಸೋಂಕಿತರ ಸಂಖ್ಯೆ 766ಕ್ಕೆ ಏರಿಕೆಯಾಗಿರೋದಾಗಿ ತಿಳಿಸಿದ್ದಾರೆ.
287 new Omicron cases confirmed in Bengaluru today taking the overall tally in the State to 766.#Omicron #COVID19 @BSBommai
— Dr Sudhakar K (@mla_sudhakar) January 17, 2022
ಅಂದಹಾಗೇ ನಿನ್ನೆ ರಾಜ್ಯದಲ್ಲಿ ಕೊರೋನಾ ಭೀಕರ ಮಹಾಸ್ಪೋಟವೇ ಉಂಟಾಗಿತ್ತು. 24 ಗಂಟೆಯಲ್ಲಿ ಹೊಸದಾಗಿ 34,047 ಮಂದಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಅಲ್ಲದೇ ಸೋಂಕಿನಿಂದ 13 ಮಂದಿ ಸಾವನ್ನಪ್ಪಿದ್ದಾರೆ.
ರಾಜ್ಯ ಆರೋಗ್ಯ ಇಲಾಖೆ ಕೊರೋನಾ ಹೆಲ್ತ್ ಬುಲೆಟಿನ್ ನಲ್ಲಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 21,071, ಬೆಳಗಾವಿ 468, ಹಾಸನ 1171, ಮೈಸೂರು 1892, ತುಮಕೂರು 1373 ಸೇರಿದಂತೆ 34,047 ಮಂದಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ ಎಂದು ತಿಳಿಸಿತ್ತು.
34047 ಮಂದಿಗೆ ಕೊರೋನಾ ಸೋಂಕು ಕಾಣಿಸಿಕೊಂಡ ಕಾರಣ, 3220087ಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. ಸೋಂಕಿನಿಂದ 5902 ಜನರು ಗುಣಮುಖರಾಗಿದ್ದಾರೆ. ಇದುವರೆಗೆ 2983645 ಜನರು ಗುಣಮುಖರಾಗಿದ್ದಾರೆ. ಈಗ ರಾಜ್ಯದಲ್ಲಿ 197982 ಸಕ್ರೀಯ ಸೋಂಕಿತರಿದ್ದಾರೆ ಎಂದು ತಿಳಿಸಿತ್ತು.
ಬೆಂಗಳೂರು ನಗರದಲ್ಲಿ 5, ಚಿಕ್ಕಬಳ್ಳಾಪುರದಲ್ಲಿ ಒಬ್ಬರು, ದಕ್ಷಿಣ ಕನ್ನಡದಲ್ಲಿ ಇಬ್ಬರು, ಹಾಸನ 01, ಕಲಬುರ್ಗಿ 01, ಮಂಡ್ಯ 01, ಮೈಸೂರು 01, ರಾಮನಗರ 01 ಸೇರಿದಂತೆ 13 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಹೀಗಾಗಿ ಕಿಲ್ಲರ್ ಕೊರೋನಾಗೆ ಬಲಿಯಾದವರ ಸಂಖ್ಯೆ 38,431ಕ್ಕೆ ಏರಿಕೆಯಾಗಿತ್ತು.