ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ನಾಲ್ಕನೇ ಅಲೆ ಆತಂಕ ಎದುರಾಗಿದ್ದು, ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರೀ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯಗೊಳಿಸುವಂತೆ ಬಿಬಿಎಂಪಿ ವಿಶೇಷ ಆಯುಕ್ತ ಕೆ. ಹರೀಶ್ ಕುಮಾರ್ ಸೂಚನೆ ನೀಡಿದ್ದಾರೆ.
ರಾಜ್ಯದಲ್ಲಿ ನಿನ್ನೆ ಒಂದೇ ದಿನ 301 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಪೈಕಿ ಬೆಂಗಳೂರಿನಲ್ಲೇ 291 ಮಂದಿಗೆ ಸೋಂಕು ತಗುಲಿರುವುದು ಆತಂಕಕ್ಕೆ ಕಾರಣವಾಗಿದೆ. ಈ ಮೂಲಕ ಬೆಂಗಳೂರಿನಿಂದಲೇ ರಾಜ್ಯಕ್ಕೆ ಕೊರೊನಾ ನಾಲ್ಕನೇ ಪ್ರವೇಶವಾಗುವ ಅತಂಕ ಶುರುವಾಗಿದೆ.
ಬೆಂಗಳೂರು ನಗರ ಜಿಲ್ಲೆಯಲ್ಲಿ ನಿನ್ನೆ ಒಂದೇ ದಿನ 291 ಕೊರೊನಾ ಪ್ರಕರಣಗಳು ಪತ್ತೆಯಗಿದ್ದು, ಈ ಮೂಲಕ ಕೊರೊನಾ ಪ್ರಕರಣಗಳ ಸಂಖ್ಯೆ 17,88,895ಕ್ಕೆ ಏರಿಕೆಯಾಗಿದೆ. ಹೀಗಾಗಿ ಬೆಂಗಳೂರಿನಲ್ಲಿ ಮಾಸ್ಕ್ ಧರಿಸುವುವುದು ಕಡ್ಡಾಯವಾಗಿದ್ದು, ಈ ಬಗ್ಗೆ ನಿಗಾವಹಿಸುವಂತೆ ಮಾರ್ಷಲ್ ಗಳಿಗೆ ಸೂಚನೆ ನೀಡಲಾಗಿದೆ.