News Karnataka Kannada
Thursday, May 02 2024
ಬೆಂಗಳೂರು ನಗರ

ಬೆಂಗಳೂರಿನಲ್ಲಿ ಪ್ರತಿಭಟನೆ, ಮೆರವಣಿಗೆಗೆ ನಿರ್ಬಂಧ: ಹೈಕೋರ್ಟ್‌ ಆದೇಶ

Karnataka High Court
Photo Credit :

ಬೆಂಗಳೂರು : ರಾಜ್ಯ ಹೈಕೋರ್ಟ್‌ ವಿಭಾಗೀಯ ಪೀಠ ಮಹತ್ವದ ಆದೇಶ ನೀಡಿದ್ದು, ಬೆಂಗಳೂರಲ್ಲಿ ಪ್ರತಿಭಟನೆ, ಮೆರವಣಿಗೆಗೆ ಹೈಕೋರ್ಟ್‌ ನಿರ್ಬಂಧ ವಿಧಿಸಿದೆ. ಇನ್ನು ಫ್ರೀಡಂಪಾರ್ಕ್‌ನ ನಿಗಧಿತ ಜಾಗದಲ್ಲಿ ಮಾತ್ರ ಪ್ರತಿಭಟನೆ, ಮೆರವಣಿಗೆಗೆ ಅವಕಾಶ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

ಕಾಂಗ್ರೆಸ್‌ ಮೇಕೆದಾಟು ಪಾದಯಾತ್ರೆಯಿಂದಾಗಿ ಟ್ರಾಫಿಕ್‌ ಜಾಮ್‌ ಹಿನ್ನೆಲೆ ಐಪಿಎಲ್‌ ಸಲ್ಲಿಸಲಾಗಿತ್ತು. ಸಧ್ಯ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್‌ ಈ ಮಹತ್ವದ ಆದೇಶ ಹೊರಡಿಸಿದೆ. ಇನ್ನೂ ನ್ಯಾಯಾಮೂರ್ತಿಗಳಿಗೂ ಟ್ರಾಫಿಕ್‌ ಜಾಮ್‌ ಬಿಸಿ ತಟ್ಟಿದ್ದು, ಈ ಐಪಿಎಲ್‌ ವಿಚಾರಣೆ ವೇಳೆ ನ್ಯಾಯಾಧೀಶರು ರಾಜ್ಯ ಸರ್ಕಾರವನ್ನ ತರಾಟೆಗೆ ತೆಗೆದುಕೊಂಡರು.

‘ಪ್ರತಿಭಟನೆ, ಮೆರವಣಿಗೆ ನಿಲ್ಲಿಸಲು ಸರ್ಕಾರಕ್ಕೆ ಸಾಧ್ಯವಿಲ್ಲವೇ? ಮೇಖ್ರಿ ಸರ್ಕಲ್‌, ಅರಮನೆ ಮೈದಾನದ ಬಳಿ ಜಾಮ್‌ ಆಗಿದೆ. ನ್ಯಾಯ ಗ್ರಾಮದಿಂದ ಹೈಕೋರ್ಟ್‌ಗೆ ಬರಲು ಒಂದು ಗಂಟೆಯಾಗಿದೆ. ಹೀಗಾದರೆ ಬೆಂಗಳೂರಿನ ಜನರು ಕೆಲಸ ಮಾಡುವುದು ಹೇಗೆ? ಇದೇ ಮೊದಲು ಪ್ರತಿಭಟನೆ ನಡೆಯುತ್ತಿಲ್ಲ. ಹಿಂದಿನಿಂದಲೂ ಪ್ರತಿಭಟನೆಗಳಿಂದ ಟ್ರಾಫಿಕ್‌ ಜಾಮ್‌ ಆಗ್ತಿದೆ. ಈಗ ಆಗದಿದ್ದರೆ ಇನ್ಯಾವಾಗ ಕ್ರಮ ಕೈಗೊಳ್ಳುತ್ತೀರಿ? ಎಂದು ರಾಜ್ಯ ಸರ್ಕಾರವನ್ನ ಸಿಜೆ ರಿತುರಾಜ್‌ ಅವಸ್ತಿ, ನ್ಯಾ. ಕೃಷ್ಣಕುಮಾರ್‌ ಅವರಿದ್ದ ಪೀಠ ತರಾಟೆಗೆ ತೆಗೆದುಕೊಂಡಿದೆ.

ಇನ್ನು ‘ನಿಗದಿತ ಸ್ಥಳ ಬಿಟ್ಟ ಬೇರೆಡೆ ಪ್ರತಿಭಟನೆಗೆ ಅವಕಾಶ ನೀಡಬಾರದು. ಯಾವುದೇ ಸಂಘಟನೆ, ಪಕ್ಷಗಳಿಗೆ ಅವಕಾಶ ನೀಡಬಾರದು. ಪ್ರತಿಭಟನೆಗಳಿಂದಾಗಿ ದೈನಂದಿನ ಜೀವನದ ಮೇಲೆ ಪರಿಣಾಮವಾಗ್ತಿದೆ. ಟ್ರಾಫಿಕ್‌ ಜಾಮ್‌ನಿಂದ ಬೆಂಗಳೂರಿನಲ್ಲಿ ಜನರಿಗೆ ಸಮಸ್ಯೆಯಾಗುತ್ತಿದೆ. ಇಂತಹ ಮೆರವಣಿಗೆಗಳ ಮೇಲೆ ಸರ್ಕಾರ ಕ್ರಮ ಕೈಗೊಳ್ಳಬೇಕು. ಇಂತಹ ಘಟನೆಗಳು ಪುನರಾವರ್ತನೆಯಾಗದಂತೆ ಕ್ರಮ ತೆಗೆದುಕೊಳ್ಳಿ’ ಎಂದು ಸರ್ಕಾರಕ್ಕೆ ಸೂಚಿಸಿದ್ರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು