ಬೆಂಗಳೂರು: ನಗರದಲ್ಲಿ ಶುಕ್ರವಾರ ಕೂಡ ಭಾರೀ ಮಳೆಯಾಗಿದ್ದು, ಹಲವಾರು ಕಡೆಗಳಲ್ಲಿ ಮರ ಬಿದ್ದು ಸಂಚಾರಕ್ಕೆ ಅಡ್ಡಿಯಾಗಿರುವ ಬಗ್ಗೆ ವರದಿಯಾಗಿದೆ.
ಮಲ್ಲೇಶ್ವರಂನಲ್ಲಿ ಗಾಳಿ ಮಳೆಗೆ ಮರಗಳು ಧರೆಗುರುಳಿವೆ. ಸುಮಾರು 17 ಮರಗಳು ಧರೆಗುಳಿದಿದೆ ಎಂದು ತಿಳಿದುಬಂದಿದೆ. ಇದರಿಂದ ವಾಹನ ಸಂಚಾರಕ್ಕೆ ತೊಂದರೆಯಾಗಿದೆ. ಭಾರೀ ಮಳೆ ಹಾಗೂ ಮೋಡ ಕವಿದ ವಾತಾವರಣವಿದ್ದ ಕಾರಣ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಇಳಿಯಬೇಕಾಗಿದ್ದ ವಿಮಾನಗಳು ಮಳೆಯಿಂದಾಗಿ ಚೆನ್ನೈಗೆ ಕೊಂಡೊಯ್ಯಲಾಗಿದೆ. ಭಾರೀ ಮಳೆಯಿಂದಾಗಿ ರಸ್ತೆಯಲ್ಲಿ ನೀರು ತುಂಬಿ ಹರಿಯುತ್ತಿದೆ.
ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮೇಲ್ಮೈ ಸುಳಿಗಾಳಿ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ಎ.1ರ ತನಕ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.