ಬೆಂಗಳೂರಿನಲ್ಲಿ ಭೂಕಂಪದ ಯಾವುದೇ ಲಕ್ಷಣಗಳು ಕಂಡು ಬಂದಿಲ್ಲ; ಅಧಿಕಾರಿಗಳು

ಬೆಂಗಳೂರು : ನಗರದ ವಿವಿಧ ಭಾಗಗಳ ನಿವಾಸಿಗಳು ಶುಕ್ರವಾರ ಲಘು ಕಂಪನದೊಂದಿಗೆ ಗೆ ಜೋರಾದ ಧ್ವನಿ ಕೇಳಿರುವ ಬಗ್ಗೆ ಹೇಳಿಕೊಂಡ ಬಳಿಕ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ(KSNDMC) ಪ್ರತಿಕ್ರಿಯಿಸಿದ್ದು, ಬೆಂಗಳೂರಿನಲ್ಲಿ ಕಂಪನ ಅಥವಾ ಭೂಕಂಪದ ಯಾವುದೇ ಲಕ್ಷಣಗಳು ಕಂಡು ಬಂದಿಲ್ಲ ಎಂದು ತಿಳಿಸಿದೆ.

ಬೆಳಿಗ್ಗೆ 11.50 ರಿಂದ 12.15 ರ ನಡುವೆ ಬೆಂಗಳೂರಿನ ಹೆಮ್ಮಿಗೆಪುರ, ಕೆಂಗೇರಿ, ಜ್ಞಾನಭಾರತಿ, ರಾಜರಾಜೇಶ್ವರಿ ನಗರ ಮತ್ತು ಕಗ್ಗಲಿಪುರದ ಸ್ಥಳೀಯ ನಿವಾಸಿಗಳಿಂದ ಇಂದು ಕಂಪನಗಳಿಗೆ ಸಂಬಂಧಿಸಿದ ವರದಿಗಳನ್ನು ಸ್ವೀಕರಿಸಲಾಗಿದೆ. ಈ ಅವಧಿಯಲ್ಲಿ ಯಾವುದೇ ಭೂಕಂಪನ ಲಕ್ಷಣಗಳು ಸಂಭವನೀಯ ಭೂಕಂಪದ ಸಂಕೇತಗಳಿಗಾಗಿ ನಮ್ಮ ಭೂಕಂಪನ ವೀಕ್ಷಣಾಲಯದಲ್ಲಿ ಕಂಡು ಬಂದಿಲ್ಲ.ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಲಬುರಗಿ ಭಾಗದಲ್ಲಿ ಕಂಪನದ ಅನುಭವ ಆದಾಗ ಕಂದಾಯ ಸಚಿವರು ಬಂದು ವಿಚಾರ ಮಾಡಿದ್ದರು. ನಮ್ಮ ಇಲಾಖೆಯಿಂದ ತನಿಖೆ ಅಗತ್ಯ ಇದ್ದರೆ ಆದೇಶ ಮಾಡುತ್ತೇನೆ,ಹೆಚ್ಚಿನ ಮಳೆಯಾದಂತಹ ಸಂದರ್ಭದಲ್ಲಿ ಇತಂಹ ಅನುಭವ ಕಾಣುತ್ತದೆ. ಈ ಬಾರೀಯೂ ಹೆಚ್ಚಿನ ಮಳೆಯಾಗಿದೆ ಹಾಗಾಗಿ ಗುಲ್ಬರ್ಗ ಭಾಗದಲ್ಲಿ ಹೆಚ್ಚಿನ ಅನುಭವ ಕಾಣುತ್ತಿದ್ದೇವೆ. ನಮ್ಮ ಇಲಾಖೆಯ ಕಾರ್ಯದರ್ಶಿ ಗಳಿಂದ ಮಾಹಿತಿ ಪಡೆದು, ನಮ್ಮ ತಂತ್ರಜ್ಞರ ಉಪಯೋಗ ಪಡೆಯುತ್ತೇವೆ ಎಂದು ಲೋಕೋಪಯೋಗಿ ಸಚಿವ ಸಿ ಸಿ ಪಾಟೀಲ್ ಹೇಳಿಕೆ ನೀಡಿದ್ದಾರೆ.

ದೇಶದ ಈಶಾನ್ಯ ಭಾಗದಲ್ಲೂ ಕಂಪನ

ಶುಕ್ರವಾರ ಮುಂಜಾನೆ ಅಸ್ಸಾಂ ಮತ್ತು ಮಿಜೋರಾಂ ಸೇರಿದಂತೆ ಈಶಾನ್ಯ ಪ್ರದೇಶದಲ್ಲಿ 6.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪನ ಇಲಾಖೆ ತಿಳಿಸಿದೆ.

ಇಲಾಖೆ ಹಂಚಿಕೊಂಡ ಮಾಹಿತಿಯ ಪ್ರಕಾರ, ಭೂಕಂಪವು ಮಿಜೋರಾಂ ಬಳಿಯ ಮ್ಯಾನ್ಮಾರ್‌ನ ಗಡಿಯ ಸಮೀಪ ಕೇಂದ್ರೀಕೃತವಾಗಿತ್ತು. ಅಲ್ಲಿ ಇದುವರೆಗೆ ಯಾವುದೇ ಜೀವ ಹಾನಿ ಅಥವಾ ಆಸ್ತಿ ಹಾನಿಯ ವರದಿಯಾಗಿಲ್ಲ.

Gayathri SG

Recent Posts

ನಾಳೆ ಪ್ರಚಾರ ನಿಮಿತ್ಯ ಕಲಬುರಗಿಯ ಸೇಡಂ ತಾಲೂಕಿಗೆ ಪ್ರಿಯಾಂಕಾ ಗಾಂಧಿ

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ನಾಳೆ ಸೇಡಂಗೆ ಆಗಮಿಸಲಿದ್ದು, ಪಕ್ಷದ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಪರ ಪ್ರಚಾರ…

7 hours ago

ಅಧಿಕಾರಕ್ಕಾಗಿ ಮಾನವಿಯತೆ ಮರೆತಿದ್ದಾರೆ ಖಂಡ್ರೆ : ಭಗವಂತ ಖೂಬಾ

ಜಿಲ್ಲಾ ಉಸ್ತುವಾರಿ ಮಂತ್ರಿಯಾಗಿರುವ ಈಶ್ವರ ಖಂಡ್ರೆ, ಈ ಚುನಾವಣೆಯಲ್ಲಿ ಹೇಗಾದರೂ ಮಾಡಿ ಗೆಲ್ಲಲೆಬೆಕೆನ್ನುವ ಉದ್ದೇಶದಿಂದ, ಮನುಷ್ಯತ್ವ, ಮಾನವಿಯತೆ ಮರೆತು ಬಿಟ್ಟಿದ್ದಾರೆ,…

8 hours ago

ಕಾಂಗ್ರೆಸ್‌ ಬಂದರೆ ಮುಸ್ಲಿಮರು ಹಿಂದೂಗಳ ಮನೆಗೆ ಹೊಕ್ಕಿ ಹೊಡೆಯುತ್ತಾರೆ: ಯತ್ನಾಳ್‌

'ದೇಶದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದರೆ ಮುಸ್ಲಿಮರು ಹಿಂದೂಗಳ ಮನೆಗೆ ಹೊಕ್ಕಿ ಹೊಡೆಯುತ್ತಾರೆ' ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ…

8 hours ago

ನಾಳೆಯಿಂದ ಪಿಯುಸಿ 2ನೇ ವಾರ್ಷಿಕ ಪರೀಕ್ಷೆ: ವಿದ್ಯಾರ್ಥಿಗಳಿಗೆ ಬಸ್‌ ಪ್ರಯಾಣ ಫ್ರೀ

ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯಮಾಪನ ಮಂಡಳಿಯು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಏಪ್ರಿಲ್ 29 ರಿಂದ ಮೇ…

8 hours ago

ಸೆಲ್ಫಿ ತೆಗೆಯುವಾಗ ಕೆರೆಗೆ ಬಿದ್ದ ಮಗಳು : ಕಾಪಾಡಲು ಹೋದ ತಂದೆಯೂ ಸಾವು

ಸೆಲ್ಫಿ ತೆಗೆಯುವಾಗ ಕೆರೆಗೆಬಿದ್ದ ಮಗಳ ರಕ್ಷಣೆಗೆ ಹೋಗಿ ತಂದೆಯೂ ಸಾವನ್ನಪ್ಪಿದ ಧಾರುಣ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕು ಕಾಮಸಮುದ್ರ…

8 hours ago

ಯತ್ನಾಳ್ ಬಾಯಿ, ಬೊಂಬಾಯಿ : ಸಚಿವ ಎಂ.ಬಿ‌.ಪಾಟೀಲ್ ತಿರುಗೇಟು

ಬಸನಗೌಡ ಪಾಟೀಲ್ ಯತ್ನಾಳ್ ಬಾಯಿ, ಬೊಂಬಾಯಿ. ಅವ್ರು, ಬೆಳಿಗ್ಗೆ, ಮಧ್ಯಾಹ್ನ, ರಾತ್ರಿ, ಮಲಗಿ ಎಚ್ಚರಾದ್ಮೇಲೆ ಒಂದು ಹೇಳ್ತಾರೆ. ಇವ್ರ ಮಾತನ್ನ…

8 hours ago