ಸಿನಿಮಾ ವೀಕ್ಷಣೆ ಬಳಿಕ ‘ಕಾಶ್ಮೀರ್ ಫೈಲ್ಸ್’ ಸಿನಿಮಾಕ್ಕೆ ರಾಜ್ಯದ ಚಿತ್ರಮಂದಿರಗಳಲ್ಲಿ ತೆರಿಗೆ ವಿನಾಯಿತಿ ಘೋಷಿಸಿದ್ದಾರೆ. ಕಾಶ್ಮೀರಿ ಪಂಡಿತರ ಹತ್ಯಾಕಾಂಡಕ್ಕೆ ಸಂಬಂಧಿಸಿದ ಸಿನಿಮಾ ಇದಾದರಿಂದ ಪಕ್ಷದ ಸೂಚನೆ ಮೇರೆಗೆ ಮುಖ್ಯಮಂತ್ರಿ ಬೊಮ್ಮಾಯಿ ಸಿನಿಮಾ ವೀಕ್ಷಿಸಿದ್ದಾರೆ. ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ನೋಡಿ ಬಂದ ಬಳಿಕ ಸಿಎಂ ಬಸವರಾಜ್ ಬೊಮ್ಮಾಯಿ ಮಾತನಾಡಿದ್ದು, ಈ ಸಿನಿಮಾ ನೋಡಿದ ಬಳಿಕ ನನಗೆ ಮಾತನಾಡಲು ಆಗುತ್ತಿಲ್ಲ. ಯಾವ ಪರಿ ಕಾಶ್ಮೀರದಲ್ಲಿ ಕಾಶ್ಮೀರಿ ಪಂಡಿತರ ಮೇಲೆ ದಾಳಿಯಾಗಿತ್ತು ಎನ್ನುವದನ್ನ ತೋರಿಸಿದ್ದಾರೆ. ಅದೆಷ್ಟೂ ಜನ ಉಗ್ರರ ಕೈಲಿ ಸಿಕ್ಕಿ ಪ್ರಾಣವನ್ನ ಬಿಟ್ಟಿದ್ದಾರೆ. ಹೀಗಾಗಿಯೇ ಅಲ್ಲಿ ಆರ್ಟಿಕಲ್ 370 ಯನ್ನ ನರೇಂದ್ರ ಮೋದಿ ಸರ್ಕಾರ ತೆರವುಗೊಳಿಸಿತು. ಇದಕ್ಕಾಗಿ ನಾನು ಅವರಿಗೆ ಧನ್ಯವಾದ ಹೇಳುತ್ತೇನೆ. ಪ್ರತಿಯೊಬ್ಬ ಭಾರತೀಯರು ಈ ಸಿನಿಮಾವನ್ನ ನೋಡಬೇಕು. ಹೀಗಾಗಿ ನಾನು ಸಿನಿಮಾದ ಸಂಪೂರ್ಣ ತೆರಿಗೆ ವಿನಾಯಿತಿ ನೀಡಿ ನಾಳೆಯೇ ಅದೇಶ ಮಾಡುತ್ತೇನೆ ಎಂದರು. ಇನ್ನು ಕೇವಲ ಕರ್ನಾಟಕ ಮಾತ್ರವಲ್ಲದೆ ಗುಜರಾತ್, ಹರಿಯಾಣ, ಮಧ್ಯಪ್ರದೇಶದಲ್ಲೂ ಚಿತ್ರ ಪ್ರದರ್ಶನಕ್ಕೆ ತೆರಿಗೆ ವಿನಾಯಿತಿ ನೀಡಲಾಗಿದೆ.