ಬೆಂಗಳೂರಿನ ಗವಿಗಂಗಾಧರೇಶ್ವರ ದೇವಾಲಯದಲ್ಲಿ ಗವಿಗಂಗಾಧರೇಶ್ವರನನ್ನು ಸ್ಪರ್ಶಿಸಿದ ಸೂರ್ಯರಶ್ಮಿ

ಮಕರ ಸಂಕ್ರಾಂತಿಯ ದಿನವಾದ ಇಂದು ಸೂರ್ಯನು ದಕ್ಷಿಣಾಯನದಿಂದ ಪಥ ಬದಲಿಸಿ ಉತ್ತರಾಯಣ ಚಲನೆಗೆ ತೊಡಗುವ ದಿನ. ಈ ವೇಳೆ ಬೆಂಗಳೂರಿನ ಗವಿಗಂಗಾಧರೇಶ್ವರ ದೇವಾಲಯದಲ್ಲಿ ಸೂರ್ಯರಶ್ಮಿಯು ಗವಿಗಂಗಾಧರೇಶ್ವರನನ್ನು ಸ್ಪರ್ಶಿಸುವ ಪ್ರಕೃತಿಯ ಐತಿಹಾಸಿಕ ಕೌತುಕ ನಡೆಯಿತು.

ಆರಂಭದಲ್ಲಿ ನಂದಿವಾಹನವನ್ನು ಸ್ಪರ್ಶಿಸಿದ ಸೂರ್ಯರಶ್ಮಿಯು ಕೆಲ ಕ್ಷಣಗಳಲ್ಲೇ ಶಿವಲಿಂಗವನ್ನು ಸ್ಪರ್ಶಿಸಿತು. ಈ ಕೌತುಕ ಸಂಜೆ 5.13ರಿಂದ ಪ್ರಾರಂಭವಾಗಿ 2 ನಿಮಿಷ 13 ಸೆಕೆಂಡುಗಳ ಕಾಲ ನಡೆಯಿತು.

ಸೂರ್ಯರಶ್ಮಿ ಸ್ಪರ್ಶಿಸುವ ವೇಳೆ ಶಿವಲಿಂಗಕ್ಕೆ ವಿಶೇಷ ಬಗೆಬಗೆಯ ಅಭಿಷೇಕಗಳು ನಡೆದವು. ಸೂರ್ಯನ ಕಿರಣಗಳ ಅದ್ಭುತ ಅಭಿಷೇಕದ ಜೊತೆಗೆ ಗಂಗಾಧರೇಶ್ವರನಿಗೆ ಹಾಲು, ಎಳನೀರು, ಪವಿತ್ರ ಜಲದಿಂದ ಅಭಿಷೇಕ ಮಾಡಲಾಯಿತು.
ಕಳೆದ ವರ್ಷ ಮೋಡದಿಂದಾಗಿ ಈ ವಿಸ್ಮಯ ನಡೆದಿರಲಿಲ್ಲ. ಕೋವಿಡ್​ ಹಿನ್ನೆಲೆಯಲ್ಲಿ ಈ ಬಾರಿ ಸೂರ್ಯರಶ್ಮಿ ಸ್ಪರ್ಶ ಕಾಲದಲ್ಲಿ ಭಕ್ತರಿಗೆ ದೇವರ ದರ್ಶನ ಮಾಡಲು ಅವಕಾಶ ನೀಡಿರಲಿಲ್ಲ.

Sneha Gowda

Recent Posts

ಮದುವೆಯಾದ ನಾಲ್ಕೇ ವರ್ಷಕ್ಕೆ ವಿಚ್ಛೇದನ ಪಡೆದುಕೊಂಡ ಯಶ್‌ ಹೀರೋಯಿನ್‌!

ಸಿನಿಮಾ ರಂಗದಲ್ಲಿ ಮತ್ತೊಂದು ವಿಚ್ಛೇದನ ಖಚಿತವಾಗಿದೆ. ಸೋಶಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಹಂಚಿಕೊಳ್ಳುವ ಮೂಲಕ ಈ ಸುದ್ದಿಯನ್ನು ಖಚಿತಪಡಿಸಿದ್ದಾರೆ.

2 hours ago

ಐದು ಮಂದಿಗೆ ವೆಸ್ಟ್ ನೈಲ್ ಜ್ವರ ಪತ್ತೆ; ಅಲರ್ಟ್ ಆದ ಸರಕಾರ

ವೆಸ್ಟ್ ನೈಲ್ ಫೀವರ್ ನ ಐದು ಪ್ರಕರಣಗಳು ಕೇರಳದ ಕೋಯಿಕ್ಕೋಡ್ ಜಿಲ್ಲೆಯಲ್ಲಿ ಪತ್ತೆಯಾಗಿದ್ದು, ಇದೀಗ ಆತಂಕಕ್ಕೆ ಕಾರಣವಾಗಿದೆ.

3 hours ago

ಆಂಬುಲೆನ್ಸ್ ನೌಕರರ ಮುಷ್ಕರ ತಾತ್ಕಾಲಿಕ ಮುಂದೂಡಿಕೆ

ಬಾಕಿ ಉಳಿಸಿಕೊಂಡಿರುವ ವೇತನ ಪಾವತಿಗೆ ಆಗ್ರಹಿಸಿ 108-ಆರೋಗ್ಯ ಕವಚ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ನಡೆಸಲು ಉದ್ದೇಶಿಸಿದ್ದ ಮುಷ್ಕರವನ್ನು ತಾತ್ಕಾಲಿಕವಾಗಿ ಮುಂದೂಡಿದ್ದಾರೆ.

3 hours ago

ಬೆಂಗಳೂರಿನಲ್ಲಿ ರೌಡಿಶೀಟರ್​ ಕಾರ್ತಿಕೇಯನ್ ಬರ್ಬರ ಹತ್ಯೆ

ನಗರದ ಬಾಣಸವಾಡಿ ವ್ಯಾಪ್ತಿಯ ರಾಮಸ್ವಾಮಿ ಪಾಳ್ಯದಲ್ಲಿ ರೌಡಿಶೀಟರ್​ ಕಾರ್ತಿಕೇಯನ್(40) ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ ಮಾಡಲಾಗಿದೆ.

3 hours ago

ಪಕ್ಷದ ಬ್ಯಾಡ್ಜ್ ಧರಿಸಿ ಮತದಾನ; ಖೂಬಾ ವಿರುದ್ಧ ಪ್ರಕರಣ ದಾಖಲು

ಬೀದರ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ ಭಗವಂತ ಖೂಬಾ ಅವರು ತಮ್ಮ ಅಂಗಿ ಮೇಲೆ ಪಕ್ಷದ ಚಿಹ್ನೆ…

4 hours ago

ಬೀದರ್ ಲೋಕಸಭಾ ಕ್ಷೇತ್ರದಲ್ಲಿ ಶಾಂತಿಯುತ ಮತದಾನ

ಬೀದರ್ ಲೋಕಸಭಾ ಕ್ಷೇತ್ರದ ಒಟ್ಟು ಎಂಟು ವಿಧಾನ ಸಭಾ ಕ್ಷೇತ್ರಗಳಲ್ಲಿ ಮೇ 7 ರಂದು ಶಾಂತಿಯುತವಾಗಿ ಮತದಾನ ನಡೆಯಿತು.

4 hours ago