ಬೆಂಗಳೂರಿನ ನಮ್ಮ ಮೆಟ್ರೋಗೆ 7 ಹೊಸ ರೈಲುಗಳು ಸೇರ್ಪಡೆ

ಬೆಂಗಳೂರು, ಡಿ. 07 : ಶಿಘ್ರದಲ್ಲಿಯೇ ನಮ್ಮ ಮೆಟ್ರೋಗೆ 7 ಹೊಸ ರೈಲುಗಳು ಸೇರ್ಪಡೆಗೊಳ್ಳಲಿವೆ. ಪ್ರಸ್ತುತ ನೇರಳೆ ಮತ್ತು ಹಸಿರು ಮಾರ್ಗದಲ್ಲಿ ಒಟ್ಟು 50 ರೈಲುಗಳು ಸಂಚಾರ ನಡೆಸುತ್ತಿವೆ. ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ (ಬಿಇಎಂಲ್) ಅತ್ಯಾಧುನಿಕ ಹೊಸ 7 ರೈಲುಗಳನ್ನು ನಿರ್ಮಾಣ ಮಾಡಿದೆ. ಉತ್ತರ ಪ್ರದೇಶದ ಲಕ್ನೋದಲ್ಲಿರುವ ಆರ್‌ಡಿಎಸ್‌ಓ ಕಳೆದ ತಿಂಗಳು ಹೊರ ರೈಲಿನ ಪ್ರಾಯೋಗಿಕ ಪರೀಕ್ಷೆ ನಡೆಸಿತ್ತು.

7 ಹೊಸ ರೈಲುಗಳ ಸಂಚಾರಕ್ಕೆ ಆರ್‌ಡಿಎಸ್‌ಓ ಒಪ್ಪಿಗೆ ಕೊಟ್ಟಿದೆ. ಕೆಲವು ಬದಲಾವಣೆಗಳನ್ನು ಸೂಚಿಸಿದೆ. ಮುಂದಿನ ಹಂತದಲ್ಲಿ ಬಿಇಎಂಎಲ್ ಮೆಟ್ರೋ ರೈಲು ಸುರಕ್ಷತಾ ಆಯುಕ್ತರು (ಸಿಎಂಆರ್‌ಎಸ್) ಒಪ್ಪಿಗೆ ಪಡೆಯಬೇಕು. ಬಳಿಕ ರೈಲು ಸಂಚಾರ ಆರಂಭವಾಗಲಿದೆ.

ಬಿಎಂಆರ್‌ಸಿಎಲ್ ಬೈಯಪ್ಪನಹಳ್ಳಿ-ವೈಟ್‌ಫೀಲ್ಡ್ ಮಾರ್ಗದಲ್ಲಿ ಓಡಿಸಲು ಈ ರೈಲುಗಳನ್ನು ಖರೀದಿ ಮಾಡಿದೆ. ಈ ಮಾರ್ಗದ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, 2022ರ ಅಂತ್ಯಕ್ಕೆ ರೈಲು ಸಂಚಾರ ಆರಂಭವಾಗುವ ನಿರೀಕ್ಷೆ ಇದೆ.

ಹೊಸ ರೈಲುಗಳು ಬಂದ ತಕ್ಷಣ ಮಾರ್ಗ ನಿರ್ಮಾಣ ಕಾಮಗಾರಿ ಪೂರ್ಣಗೊಳ್ಳಲಿ ಎಂದು ಕಾಯುವುದಿಲ್ಲ. ಉತ್ತರ-ದಕ್ಷಿಣ ಕಾರಿಡಾರ್ ಮತ್ತು ಪೂರ್ವ ಪಶ್ಚಿಮ ಕಾರಿಡಾರ್‌ಗಳಲ್ಲಿ ಅವುಗಳನ್ನು ಓಡಿಸಲಾಗುತ್ತದೆ ಎಂದು ಬಿಎಂಆರ್‌ಸಿಎಲ್ ಹೇಳಿದೆ.

ನಗರದಲ್ಲಿ ಪರಿಶೀಲನೆ; ಲಕ್ನೋದಲ್ಲಿರುವ ಆರ್‌ಡಿಎಸ್‌ಓನ 14 ಅಧಿಕಾರಿಗಳ ತಂಡ ಅಕ್ಟೋಬರ್ 10 ರಿಂದ 27ರ ತನಕ ಬೆಂಗಳೂರಿನಲ್ಲಿ ಹೊಸ ರೈಲುಗಳ ಪರಿಶೀಲನೆ, ಪ್ರಾಯೋಗಿಕ ಸಂಚಾರ ನಡೆಸಿದೆ. ರೈಲಿನ ವೇಗ, ತುರ್ತು ಬ್ರೇಕ್‌ಗಳ ಕಾರ್ಯ ನಿರ್ವಹಣೆ ಬಗ್ಗೆ ಪರಿಶೀಲನೆ ಪೂರ್ಣಗೊಳಿಸಿದೆ.

ಸಂಪಿಗೆ ರಸ್ತೆ-ಪೀಣ್ಯ ಇಂಡಸ್ಟ್ರಿ ನಿಲ್ದಾಣಗಳ ನಡುವೆ ರಾತ್ರಿ 10 ರಿಂದ ಬೆಳಗ್ಗೆ 4.30ರ ತನಕ ರೈಲುಗಳ ಪ್ರಾಯೋಗಿಕ ಸಂಚಾರ ನಡೆಸಲಾಗಿದೆ. ಒಟ್ಟು 5 ದಿನ ಪ್ರಾಯೋಗಿಕ ಸಂಚಾರ ನಿಗದಿಯಾಗಿತ್ತು. ಅವಧಿಗೂ ಮೊದಲೇ ಅದು ಪೂರ್ಣಗೊಂಡಿದ್ದು, ರೈಲು ಸಂಚಾರಕ್ಕೆ ಹಸಿರು ನಿಶಾನೆ ಸಿಕ್ಕಿದೆ.

Gayathri SG

Recent Posts

ಇಂದು 49 ಕ್ಷೇತ್ರಗಳಲ್ಲಿ 5ನೇ ಹಂತದ ಮತದಾನ

ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನವು ಸೋಮವಾರ (ಮೇ 20) ನಡೆಯಲಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ…

17 mins ago

ಇಂದಿನ ರಾಶಿ ಭವಿಷ್ಯ : ಈ ರಾಶಿಯವರಿಗೆ ಹೊಸ ಉದ್ಯೋಗ ಆಫರ್ ಬರಲಿದೆ

ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮೇ​​​​​ 20) ರಾಶಿ ಭವಿಷ್ಯದಲ್ಲಿ ಯಾರ ರಾಶಿ…

28 mins ago

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

8 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

9 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

9 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

9 hours ago