ಬೆಂಗಳೂರು : ಹಿಜಾಬ್-ಕೇಸರಿ ಶಾಲು ವಿವಾದ ಹಿನ್ನೆಲೆಯಲ್ಲಿ ಬೆಂಗಳೂರಿನ ಶಾಲಾ-ಕಾಲೇಜುಗಳ ಸುತ್ತಮುತ್ತ 144 ಸೆಕ್ಷನ್ ಜಾರಿಗೊಳಿಸಿ ಆದೇಶ ಹೊರಡಿಸಲಾಗಿದೆ.
ಹಿಜಾಬ್-ಕೇಸರಿ ಶಾಲು ವಿವಾದ ಹತ್ತಿಕ್ಕಲು ಸರ್ಕಾರ ಈಗಾಗಲೇ ಮೂರು ದಿನಗಳ ಕಾಲ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದೆ. ಇಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶಿಸಿದ್ದಾರೆ. ಈ ವೇಳೆ ಯಾವುದೇ ಮೆರವಣಿಗೆ ಹಾಗೂ ಪ್ರತಿಭಟನೆ ಮಾಡುವಂತಿಲ್ಲ.
ಹಿಜಾಬ್ ಪರ-ವಿರೋಧವಾಗಿ ರಾಜ್ಯದ ಹಲವು ಭಾಗಗಳಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಬೆಂಗಳೂರಿನಲ್ಲಿಯೂ ಪ್ರತಿಭಟನೆ ನಡೆಸುವ ಸಾಧ್ಯತೆಯಿರುವುದರಿಂದ ರಾಜ್ಯ ಇಂಟಲಿಜೆನ್ಸ್ ಬ್ಯೂರೋ ಮಾಹಿತಿ ಮೇರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.