News Karnataka Kannada
Thursday, May 02 2024
ಬೆಂಗಳೂರು ನಗರ

ಬೆಂಗಳೂರಿನ ಶಾಲೆಗಳಿಗೆ ಹುಸಿ ಬಾಂಬ್ ಬೆದರಿಕೆ: ಆರೋಪಿ ಪತ್ತೆ

He was asked to update the KYC and demanded Rs 3 lakh. Cheated
Photo Credit :

ಬೆಂಗಳೂರು, ಮೇ.23: ಬೆಂಗಳೂರಿನ ಕೆಲ ಶಾಲೆಗಳಿಗೆ ಹುಸಿ ಬಾಂಬ್ ಬೆದರಿಕೆವೊಡ್ಡಿದ್ದ ಬಗ್ಗೆ ತನಿಖೆ ನಡೆಸಿರುವ ಪೊಲೀಸ್ ಅಧಿಕಾರಿಗಳು, ಇಮೇಲ್ ಮಾಡಿದ್ದ ಅಪ್ರಾಪ್ತನನ್ನು ಗುರುತಿಸಿದ್ದಾರೆ ಎಂದು ವರದಿಯಾಗಿದೆ.

ತಮಿಳುನಾಡು ಮೂಲದ 17 ವರ್ಷದ ಬಾಲಕನೇ ಇ-ಮೇಲ್‍ಗಳ ಮೂಲಕ ಹುಸಿ ಬಾಂಬ್ ಕರೆ ಮಾಡಿರುವುದು ಗೊತ್ತಾಗಿದೆ. ಕಳೆದ ಎಪ್ರಿಲ್‍ನಲ್ಲಿ ಬೆಂಗಳೂರಿನ 10ಕ್ಕೂ ಹೆಚ್ಚು ಶಾಲೆಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಹುಸಿಬಾಂಬ್ ಕರೆ ಪ್ರಕರಣ ಬೆಳಕಿಗೆ ಬಂದಿತ್ತು. ಈ ಸಂಬಂಧ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯ ಪತ್ತೆ ಮಾಡಿದ್ದಾರೆ. ಈತ ಭೂಪಾಲ್‍ನ ಕೆಲ ಶಾಲೆಗಳಿಗೂ ದುಷ್ಕರ್ಮಿಗಳು ಇಮೇಲ್ ಮಾಡಿ ಬಾಂಬ್ ಇಟ್ಟಿರುವುದಾಗಿ ಹುಸಿ ಸಂದೇಶ ಕಳುಹಿಸಿದ್ದನು ಎಂದು ಹೇಳಲಾಗುತ್ತಿದೆ.

ತಮಿಳುನಾಡಿನ ಮೂಲದವನಾಗಿರುವ 17 ವರ್ಷದ ಬಾಲಕ ಸಾಫ್ಟ್ ವೇರ್ ಕಂಪನಿ ಮಾಡುವ ಆಶಯ ಹೊಂದಿದ್ದ. ಜತೆಗೆ, ಮಲ್ಟಿಪಲ್ ಮೇಲ್ ಕಳಿಸುವ ಬೋಟ್ ಸಾಫ್ಟ್ ವೇರ್ ಪ್ರೋಗ್ರಾಮ್ ಸಿದ್ಧಪಡಿಸಿ ಬಳಿಕ ವಿದೇಶಿಯರಿಗೆ ಕಂಪ್ಯೂಟರ್ ಪ್ರೋಗ್ರಾಮ್ ಮಾರಾಟ ಮಾಡಿದ್ದ. ದುಷ್ಕರ್ಮಿಗಳು ಇದೇ ಸಾಫ್ಟ್ ವೇರ್ ನಿಂದ  ಬೆಂಗಳೂರು ಹಾಗೂ ಭೂಪಾಲ್ ಶಾಲೆಗಳಿಗೆ ಬೆದರಿಕೆ ಇಮೇಲ್ ಕಳಿಸಿದ್ದರು ಎಂದು ತಿಳಿದು ಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು