News Karnataka Kannada
Thursday, May 09 2024
ಬೆಂಗಳೂರು ನಗರ

ಬೆಂಗಳೂರು : ಉದ್ಯಮಿಗೆ 1 ಕೋಟಿ 80 ಲಕ್ಷ ರೂಪಾಯಿ ವಂಚನೆ

Arrest 22082021
Photo Credit :

ಬೆಂಗಳೂರು: ಉದ್ಯಮಿಯೊಬ್ಬರಿಗೆ ಸಾಲಕೊಡುವುದಾಗಿ ನೂರು ಕೋಟಿ ಸಾಲದ ಆಸೆ ತೋರಿಸಿ 1 ಕೋಟಿ 80 ಲಕ್ಷ ರೂಪಾಯಿ ವಂಚಿಸಿರುವ ಘಟನೆ ಬೆಂಗಳೂರಿನ ಎಚ್‍ಎಸ್‍ಆರ್ ಲೇಔಟ್‍ನಲ್ಲಿ ನಡೆದಿದ್ದು, ಈ ಸಂಬಂಧ ಮೂವರನ್ನು ಬಂಧಿಸಲಾಗಿದೆ.ಹೈದರಾಬಾದ್ ಮೂಲದ ಉದ್ಯಮಿ ಮಂಥೆನಾ ತರುಣ್ ಗಾಂಧಿ ವಂಚನೆಗೊಳಗಾದ ವ್ಯಕ್ತಿ. ಕಾರ್ತಿವೇಲನ್ ವಂಚನೆಗೈದ ವ್ಯಕ್ತಿ.

ಮಂಥೆನಾ ತರುಣ್ ಗಾಂಧಿ ಹೊಸ ಉದ್ಯಮ ಆರಂಭಿಸುವ ಸಲುವಾಗಿ ಸಾಲದ ಹುಡುಕಾಟದಲ್ಲಿದ್ದರು. ಈ ವೇಳೆ ಇವರ ಸಂಬಂಧಿಕರೊಬ್ಬರು ಬೆಂಗಳೂರಿನ ಪ್ಯೂಚರ್ ಕ್ರೆಸ್ಟ್ ವೆಂಚರ್ಸ್ ಕಂಪನಿ ಸಾಲ ಕೊಡುವುದಾಗಿ ಮಾಹಿತಿ ನೀಡಿದರು.

ತದನಂತರ ಕಂಪೆನಿಯನ್ನು ಸಂಪರ್ಕಿಸಿದಾಗ ಕಂಪನಿ ಮುಖ್ಯಸ್ಥ ಕಾರ್ತಿವೇಲನ್ ಅವರು ನೂರು ಕೋಟಿ ಸಾಲ ನೀಡಬೇಕಾದರೆ ಮೂರು ತಿಂಗಳ ಬಡ್ಡಿಯನ್ನು ಮುಂಗಡವಾಗಿ ಕಟ್ಟಬೇಕಾಗುತ್ತದೆ ಎಂದು ಹೇಳಿದ್ದಾರೆ. ಇದಕ್ಕೆ ಒಪ್ಪಿದ ಮಂಥೆನಾ ತರುಣ್ ಮುಂಗಡವಾಗಿ 1 ಕೋಟಿ 80 ಲಕ್ಷ ನೀಡಿದ್ದಾರೆ. ಆದರೆ ಬಡ್ಡಿ ನೀಡಿದರೂ ಸಾಲ ಬರದಿದ್ದಾಗ ಆತ ಪರಾರಿಯಾಗಿರುವ ವಿಚಾರ ತಿಳಿದು ಬಂದಿದೆ.

ಈ ಕಡೆ ಸಾಲವೂ ನೀಡದೆ ಬಡ್ಡಿಯೂ ಇಲ್ಲದೇ ಕಾರ್ತಿವೇಲನ್ ಪರಾರಿಯಾಗಿದ್ದು, ಕಂಗಾಲಾದ ಉದ್ಯಮಿ ಎಚ್‍ಎಸ್‍ಆರ್ ಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಇವರ ದೂರಿನನ್ವಯ ಈಗಾಗಲೇ ಮೂವರನ್ನು ಬಂಧಿಸಲಾಗಿದ್ದು, ಮುಖ್ಯ ಆರೋಪಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು