ಬೆಂಗಳೂರು: ಉದ್ಯಮಿಯೊಬ್ಬರಿಗೆ ಸಾಲಕೊಡುವುದಾಗಿ ನೂರು ಕೋಟಿ ಸಾಲದ ಆಸೆ ತೋರಿಸಿ 1 ಕೋಟಿ 80 ಲಕ್ಷ ರೂಪಾಯಿ ವಂಚಿಸಿರುವ ಘಟನೆ ಬೆಂಗಳೂರಿನ ಎಚ್ಎಸ್ಆರ್ ಲೇಔಟ್ನಲ್ಲಿ ನಡೆದಿದ್ದು, ಈ ಸಂಬಂಧ ಮೂವರನ್ನು ಬಂಧಿಸಲಾಗಿದೆ.ಹೈದರಾಬಾದ್ ಮೂಲದ ಉದ್ಯಮಿ ಮಂಥೆನಾ ತರುಣ್ ಗಾಂಧಿ ವಂಚನೆಗೊಳಗಾದ ವ್ಯಕ್ತಿ. ಕಾರ್ತಿವೇಲನ್ ವಂಚನೆಗೈದ ವ್ಯಕ್ತಿ.
ಮಂಥೆನಾ ತರುಣ್ ಗಾಂಧಿ ಹೊಸ ಉದ್ಯಮ ಆರಂಭಿಸುವ ಸಲುವಾಗಿ ಸಾಲದ ಹುಡುಕಾಟದಲ್ಲಿದ್ದರು. ಈ ವೇಳೆ ಇವರ ಸಂಬಂಧಿಕರೊಬ್ಬರು ಬೆಂಗಳೂರಿನ ಪ್ಯೂಚರ್ ಕ್ರೆಸ್ಟ್ ವೆಂಚರ್ಸ್ ಕಂಪನಿ ಸಾಲ ಕೊಡುವುದಾಗಿ ಮಾಹಿತಿ ನೀಡಿದರು.
ತದನಂತರ ಕಂಪೆನಿಯನ್ನು ಸಂಪರ್ಕಿಸಿದಾಗ ಕಂಪನಿ ಮುಖ್ಯಸ್ಥ ಕಾರ್ತಿವೇಲನ್ ಅವರು ನೂರು ಕೋಟಿ ಸಾಲ ನೀಡಬೇಕಾದರೆ ಮೂರು ತಿಂಗಳ ಬಡ್ಡಿಯನ್ನು ಮುಂಗಡವಾಗಿ ಕಟ್ಟಬೇಕಾಗುತ್ತದೆ ಎಂದು ಹೇಳಿದ್ದಾರೆ. ಇದಕ್ಕೆ ಒಪ್ಪಿದ ಮಂಥೆನಾ ತರುಣ್ ಮುಂಗಡವಾಗಿ 1 ಕೋಟಿ 80 ಲಕ್ಷ ನೀಡಿದ್ದಾರೆ. ಆದರೆ ಬಡ್ಡಿ ನೀಡಿದರೂ ಸಾಲ ಬರದಿದ್ದಾಗ ಆತ ಪರಾರಿಯಾಗಿರುವ ವಿಚಾರ ತಿಳಿದು ಬಂದಿದೆ.
ಈ ಕಡೆ ಸಾಲವೂ ನೀಡದೆ ಬಡ್ಡಿಯೂ ಇಲ್ಲದೇ ಕಾರ್ತಿವೇಲನ್ ಪರಾರಿಯಾಗಿದ್ದು, ಕಂಗಾಲಾದ ಉದ್ಯಮಿ ಎಚ್ಎಸ್ಆರ್ ಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಇವರ ದೂರಿನನ್ವಯ ಈಗಾಗಲೇ ಮೂವರನ್ನು ಬಂಧಿಸಲಾಗಿದ್ದು, ಮುಖ್ಯ ಆರೋಪಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.
ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…
ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ.
ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.
ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…
ಜಿಪ್ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್ನಲ್ಲಿ ನಡೆದಿದೆ.
ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…