ಬೆಂಗಳೂರು, ಮಾ.31 : ತಾನು ಕೆಲಸ ಮಾಡುತ್ತಿದ್ದ ಕಂಪೆನಿಯವರು ಸಂಬಳ ನೀಡದಿದ್ದರಿಂದ ಮನನೊಂದ ಲಾರಿ ಚಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗೋವಿಂದರಾಜನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಎಸ್ಆರ್ ನಗರದಲ್ಲಿರುವ ಲಾಜಿಸ್ಟಿಕ್ ಕಂಪೆನಿಯೊಂದರಲ್ಲಿ ಲಾರಿ ಚಾಲಕರಾಗಿ ಕೆಲಸ ಮಾಡುತ್ತಿದ್ದ ಕಿರಣ್ಕುಮಾರ್ ಆತ್ಮಹತ್ಯೆಗೆ ಶರಣಾದವರು.
ಈ ಕಂಪೆನಿಯಲ್ಲಿ ಚಾಲಕರಾಗಿ ಕೆಲಸ ಮಾಡುತ್ತಿದ್ದ ಇವರಿಗೆ ಸಂಬಳ ಕೊಟ್ಟಿರಲಿಲ್ಲ. ಹಲವಾರು ಬಾರಿ ಹಣ ಕೇಳಿದರೂ ನೀಡದ ಕಾರಣ ಕಂಪೆನಿಯ ಮೂವರ ಹೆಸರು ಹೇಳಿ ನೀವು ಅರ್ಧ ಗಂಟೆಯೊಳಗೆ ನನ್ನ ಅಕೌಂಟ್ಗೆ 30 ಸಾವಿರ ಹಣ ಹಾಕದಿದ್ದರೆ ನನ್ನ ಸಾವಿಗೆ ನೀವೇ ಕಾರಣರಾಗುತ್ತೀರ, ನಂತರ ನನ್ನ ಹೆಣ ನೋಡಬೇಕಾಗುತ್ತದೆ ಎಂದು ವಿಡಿಯೋವೊಂದನ್ನು ಮಾಡಿ ಕಳುಹಿಸಿದ್ದರು.
ಆದರೆ, ರಾತ್ರಿಯಾದರೂ ಯಾವುದೇ ಹಣ ಅಕೌಂಟ್ಗೆ ಸಂದಾಯವಾಗದಿದ್ದಾಗ ಗೋವಿಂದರಾಜನಗರದ ಸಂಜೀವಿನಿ ನಗರದಲ್ಲಿರುವ ತಮ್ಮ ಮಾವನ ಮನೆಯಲ್ಲಿ ಬುಧವಾರ ರಾತ್ರಿ ಕಿರಣ್ಕುಮಾರ್ ಫ್ಯಾನ್ಗೆ ಹಗ್ಗದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸುದ್ದಿ ತಿಳಿದು ಗೋವಿಂದರಾಜನಗರ ಠಾಣೆ ಪೊಲೀಸರು ಸ್ಥಳಕ್ಕೆ ದಾವಿಸಿ ಪರಿಶೀಲನೆ ನಡೆಸಿ ಮೃತದೇಹವನ್ನು ಆಸ್ಪತ್ರೆಗೆ ರವಾನಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…
ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ.
ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.
ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…
ಜಿಪ್ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್ನಲ್ಲಿ ನಡೆದಿದೆ.
ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…